Categories: ದೇಶ

ಲೋಕಸಭೆ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ 25 ವರ್ಷದಿಂದ 18ಕ್ಕೆ ಇಳಿಸಲು ಸಲಹೆ

ವದೆಹಲಿ : ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸು ಕಡಿಮೆ ಮಾಡಲು ಇಂದು(ಆ.04)
ಸಲಹೆ ನೀಡಿರುವ ಸಂಸದೀಯ ಸಮಿತಿ, ಇದು ಯುವ ಜನರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಹೇಳಿದೆ.

ರಾಷ್ಟ್ರೀಯ ಚುನಾವಣೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಪ್ರಸ್ತುತ 25 ವರ್ಷದಿಂದ 18ಕ್ಕೆ ಇಳಿಸಲು ಬಿಜೆಪಿಯ ಸುಶೀಲ್ ಮೋದಿ ನೇತೃತ್ವದ ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.

ಕೆನಡಾ, ಬ್ರಿಟನ್ ಮತ್ತು ಆಸ್ಟ್ರೇಲಿಯಾದಂತಹ ವಿವಿಧ ದೇಶಗಳಲ್ಲಿ ಪರಿಶೀಲಿಸಿದ ಬಳಿಕ, ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸು 18 ವರ್ಷ ಇರಬೇಕು. ಕನಿಷ್ಠ ವಯಸ್ಸಿನ ಅಗತ್ಯ ಕಡಿಮೆ ಮಾಡುವುದರಿಂದ ಯುವಜನರು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಪ್ರಸ್ತುತ ಕಾನೂನು ಚೌಕಟ್ಟಿನ ಪ್ರಕಾರ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ 25 ವರ್ಷ ಆಗಿರಬೇಕು. ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಲು ಕನಿಷ್ಠ ವಯಸ್ಸು 30 ವರ್ಷ. ಮತದಾರರಾಗಿ ನೋಂದಾಯಿಸಲು 18 ವರ್ಷ ಆಗಿರಬೇಕು.

ಸಂಸತ್ತು, ರಾಜ್ಯ ಶಾಸಕಾಂಗ ಮತ್ತು ಸ್ಥಳೀಯ ಸಂಸ್ಥೆ‌ಗಳಿಗೆ ಮತದಾನ ಮಾಡಲು ಮತ್ತು ಸ್ಪರ್ಧಿಸಲು ಕನಿಷ್ಠ ವಯಸ್ಸು ನಿಗದಿಪಡಿಸುವ ವಿಷಯವನ್ನು ಆಯೋಗ ಈಗಾಗಲೇ ಪರಿಗಣಿಸಿದೆ ಮತ್ತು 18 ವರ್ಷ ವಯಸ್ಸಿನವರು ಈ ಜವಾಬ್ದಾರಿಗೆ ಅಗತ್ಯ ಅನುಭವ ಮತ್ತು ಪ್ರಬುದ್ಧತೆ ಹೊಂದಿರುತ್ತಾರೆ ಎಂದು ನಿರೀಕ್ಷಿಸುವುದು ಅವಾಸ್ತವಿಕವಾಗಿದೆ ಎಂದು ಸಂಸದೀಯ ಸಮಿತಿ ಹೇಳಿದೆ.

Ashitha S

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

10 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

15 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

26 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

29 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

42 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago