ದೆಹಲಿ: ಕಳೆದ ದಿನ(ಜನವರಿ 22) ಅಯೋಧ್ಯೆಯಲ್ಲಿ ಶ್ರೀರಾಮ ಪ್ರಭುವಿನ ಪ್ರಾಣ ಪ್ರತಿಷ್ಠೆ ನೆರವೇರಿದೆ. ಕೋಟ್ಯಾಂತರ ಹಿಂದೂಗಳ ಕನಸನ್ನು ಪ್ರಧಾನಿ ಮೋದಿಯವರು ನೆರವೇರಿಸಿದ್ದು, ಶ್ರೀರಾಮ ಪ್ರಭು ಅಯೋಧ್ಯಾ ಅಧಿಪತಿಯಾಗಿ ನೆಲೆ ನಿಂತಿದ್ದಾನೆ.
ಈ ಪ್ರಾಣ ಪ್ರತಿಷ್ಠೆ ವೇಳೆ ಗರ್ಭಗುಡಿಯೊಳಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಮುಖ ಮುಚ್ಚಿಕೊಂಡು ನಿಂತಿದ್ದರು. ಇದು ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಸದ್ಯ ಇದೀಗ ಶ್ರೀಗಳು ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು ನಮ್ಮ ಸಂಸ್ಕೃತಿ, ಆಚರಣೆ, ಪದ್ಧತಿ ಪ್ರಕಾರ ದೇವರಿಗೆ ನೈವೇದ್ಯ ನೀಡುವಾಗ, ಅರ್ಪಿಸುವಾಗ ಯಾರೂ ಕೂಡ ಅದನ್ನು ನೋಡಬಾರದು. ದೇವರು ನೈವೇದ್ಯವನ್ನು ಸ್ವೀಕರಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಇದನ್ನು ಅರ್ಚಕರು, ಮಠಾದೀಶರು ಹಾಗೂ ದೇವರನ್ನು ಆರಾಧಿಸುವವರು ಎಲ್ಲರೂ ಆಚರಿಸುತ್ತಾರೆ. ಅಂತೆಯೇ ಶ್ರೀರಾಮನಿಗೆ ಪ್ರಧಾನಿಯವರು ನೈವೇದ್ಯ ನೀಡುವಾಗ ನಾವು ನೋಡಬಾರದೆಂದು ಆ ರೀತಿ ಮಾಡಿದೆವು ಎಂದು ಹೇಳಿದ್ದಾರೆ. ಶ್ರೀಗಳ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನು ಜನವರಿ 23ರಿಂದ ಮಾರ್ಚ್ 10ರ ತನಕ ನಡೆವ ಮಂಡಲೋತ್ಸವದಲ್ಲಿ ನಿತ್ಯ ವೈದಿಕ ಮಂತ್ರ ಅನುಷ್ಠಾನ, ಅಭಿಮಂತ್ರಣ, ಕಲಶಾ ಪ್ರತಿಷ್ಠೆ, ಆಹುತಿ, ಕಲಶಾಭಿಷೇಕ, ಮುಸ್ಸಂಜೆ ಪಲ್ಲಕ್ಕಿ ಉತ್ಸವ, ವೇದ ಪಾರಾಯಣ, ಅಖಂಡ ಪಾರಾಯಣ ಇತ್ಯಾದಿಗಳೆಲ್ಲವೂ ಪೇಜಾವರಶ್ರೀವಿಶ್ವಪ್ರಸನ್ನತೀರ್ಥಶ್ರೀಪಾದರ ನೇತೃತ್ವದಲ್ಲಿ ನಡೆಯಲಿದೆ.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೇಳೆ ಗರ್ಭಗುಡಿಯಲ್ಲಿ ಐವರು ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ರಾಜ್ಯಪಾಲರು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ರಾಮ ಭೂಮಿ ಟ್ರಸ್ಟ್ನ ಅಧ್ಯಕ್ಷರು ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಗೆ ನೈವೇದ್ಯ ಸಮರ್ಪಣೆ ಮಾಡುತ್ತಿದ್ದಾಗ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಮ್ಮ ವಸ್ತ್ರದಿಂದ ಮುಖವನ್ನು ಮುಚ್ಚಿಕೊಂಡಿದ್ದರು. ಇದನ್ನು ನೋಡಿದ ಅನೇಕರಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಏಕೆ ಹೀಗೆ ಮುಖವನ್ನು ಮುಚ್ಚಿಕೊಂಡರು ಎಂಬ ಪ್ರಶ್ನೆ ಮೂಡಿತ್ತು.
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…