ನವದೆಹಲಿ: ವೈವಾಹಿಕ ಜೀವನ ಸುಗಮವಾಗಿರದ ಸಂದರ್ಭಗಳಲ್ಲಿ ಮಹಿಳಾ ಉದ್ಯೋಗಿಗಳು ಪಿಂಚಣಿಗೆ ತಮ್ಮ ಮಕ್ಕಳ ಹೆಸರನ್ನು ನೊಂದಾಯಿಸಲು ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.
ಈ ಮೊದಲು ಕೇಂದ್ರೀಯ ನಾಗರಿಕ ಸೇವೆಗಳ (ಪಿಂಚಣಿ)ನಿಯಮ, ೨೦೨೧ರ ನಿಯಮ ೫೦ರ ಪ್ರಕಾರ, ಸರ್ಕಾರಿ ಉದ್ಯೋಗಿಗಳು ಮರಣ ಹೊಂದಿದರೆ ಪಿಂಚಣಿಯನ್ನು ಅವರ ಸಂಗಾತಿಗೆ ನೀಡಲಾಗುತ್ತಿತ್ತು. ಆ ಸಂಗಾತಿಯೂ ನಿಧನರಾದರೆ ಪಿಂಚಣಿಯ ಮೊತ್ತ ಕುಟುಂಬದ ಉಳಿದ ಸದಸ್ಯರ ಕೈಸೇರುತ್ತಿತ್ತು.
ಈ ನಿಯಮಗಳನ್ನು ತಿದ್ದುಪಡಿ ಮಾಡಿದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಮಹಿಳಾ ಉದ್ಯೋಗಿಗಳು ತಮ್ಮ ಗಂಡನ ಬದಲು ಮಗು ಅಥವ ಮಕ್ಕಳ ಹೆಸರನ್ನು ಪಿಂಚಣಿಗಾಗಿ ನಾಮನಿರ್ದೇಶನ ಮಾಡಲು ಅವಕಾಶ ಒದಗಿಸಿದೆ. ಇದರಿಂದ ವಿಚ್ಛೇದನಕ್ಕೆ ಅರ್ಜಿ ಅಥವ ಕೌಟುಂಬಿಕ ಹಿಂಸಾಚಾರಗಳಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಮತ್ತು ಭಾರತೀಯ ದಂಡ ಸಂಹಿತೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ಸಂದರ್ಭಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಈ ಸವಲತ್ತನ್ನು ಒದಗಿಸಲಾಗುತ್ತದೆ ಎಂದು ಡಿಒಪಿಪಿಡಬ್ಲೂ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.
ಇದಕ್ಕಾಗಿ ಸಂಬಂಧಪಟ್ಟ ಕಛೇರಿಯ ಮುಖ್ಯಸ್ಥರಿಗೆ ಲಿಖಿತ ಮನವಿ ಸಲ್ಲಿಸಬಹುದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…