ನವದೆಹಲಿ: ಪ್ರಧಾನಿ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು. ನಂತರ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಮಹತ್ವ ಸಾರಿದ ಮೋದಿ, ‘ ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು. ಇಂದಿನ ಆಧುನಿಕ ವಿಜ್ಞಾನ, ತಂತ್ರಜ್ಞಾನದಲ್ಲಿ ಮಹಿಳೆಯರು ಹೆಚ್ಚು ಪಾಲ್ಗೊಳ್ಳಬೇಕು. ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮುನ್ನುಗ್ಗಬೇಕಿದೆ. ಇನ್ನಷ್ಟು ಮಹಿಳೆಯರು ತಂತ್ರಜ್ಞಾನದತ್ತ ಬರಲಿ, ಇದರಿಂದ ದೇಶ ಪ್ರಗತಿ ಕಡೆ ಸಾಗುತ್ತದೆ. ಈಗಾಗಲೇ ಬೇರೆ ದೇಶಕ್ಕಿಂತ ಭಾರತದಲ್ಲಿ ಹೆಚ್ಚು ಮಹಿಳಾ ಪೈಲಟ್ಗಳನ್ನು ಹೊಂದಿದೆ.
ಇದು ಭಾರತ ಆಧುನಿಕತೆಯತ್ತ ಹೆಜ್ಜೆ ಇಡುತ್ತಿರುವುದು ತೋರಿಸುತ್ತಿದೆ ಎಂದು ಹೇಳಿದರು. ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಒಂದು ವಿಷಯವೆಂದರೆ, ಮಹಿಳಾ ನೇತೃತ್ವದ ಅಭಿವೃದ್ಧಿ. ಇಂದು ಭಾರತವು ನಾಗರಿಕ ವಿಮಾನಯಾನದಲ್ಲಿ ಗರಿಷ್ಠ ಸಂಖ್ಯೆಯ ಪೈಲಟ್ಗಳನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಅಷ್ಟೇ ಅಲ್ಲದೇ, ಮಹಿಳಾ ವಿಜ್ಞಾನಿಗಳು ಚಂದ್ರಯಾನ ಮಿಷನ್ ಅನ್ನು ಮುನ್ನಡೆಸುತ್ತಿದ್ದಾರೆ.
ಟೆಕ್ನಾಲಾಜಿ, ವಿಜ್ಞಾನ, ವೈದ್ಯಕೀಯ, ಇಂಜಿನಿಯರಿಂಗ್ ವಿಭಾಗಗಳಲ್ಲಿ ಹೆಚ್ಚಾಗಿ ಯುವತಿಯರು ಉತ್ಸಾಹದಿಂದ ಸೇರಿಕೊಂಡು ಕಲಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡ್ರೋನ್ ಬಳಕೆ ಬಗ್ಗೆ ಮಹಿಳಾ ಸ್ವಸಹಾಯ ಸಂಘಗಳಿಗೆ ತರಬೇತಿ ನೀಡಲಾಗುವುದು. ಜನ ಪರ ಕಲ್ಯಾಣಕ್ಕೆ ಹೆಚ್ಚು ಹಣ ವ್ಯಯ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…