ಅಯೋಧ್ಯೆ: ಅಯೋಧ್ಯೆಗೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಕೆಲವೇ ಕೆಲವೇ ಕ್ಷಣದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಆರಂಭವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ.
ಮುಖ್ಯ ಸಮಾರಂಭವಾದ ‘ಪ್ರಾಣ ಪ್ರತಿಷ್ಠಾ’ ‘ಅಭಿಜಿತ್’ ಮುಹೂರ್ತದಲ್ಲಿ ಮಧ್ಯಾಹ್ನ 12:29:03 ರಿಂದ 12:30:35 ರವರೆಗೆ ಕೇವಲ 84 ಸೆಕೆಂಡುಗಳ ಅವಧಿಯಲ್ಲಿ ನಡೆಯಲಿದೆ. ಸಮಾರಂಭದ ನಂತರ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗಣ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದರ ನಂತರ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ಗೋಪಾಲ್ ದಾಸ್ ಭಾಷಣ ಮಾಡಲಿದ್ದಾರೆ. ತಮ್ಮ ಭಾಷಣದ ನಂತರ, ಪ್ರಧಾನಿ ಅಯೋಧ್ಯೆಯ ‘ಕುಬೇರ ತಿಲಕ’ಕ್ಕೆ ಭೇಟಿ ನೀಡಲಿದ್ದಾರೆ,