ದೆಹಲಿ: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಕನ್ನಡ ನಾಡಿನ ಈ ಹಬ್ಬಕ್ಕೆ ದೇಶದ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರು ಖುದ್ದು ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ.
ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
— Narendra Modi (@narendramodi) November 1, 2023