ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರತಿಮೆಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಅವರು ಇಂದು ರಾಮ ಮಂದಿರ ನಿರ್ಮಾಣದಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಮೇಲೆ ಹೂವಿನ ದಳಗಳನ್ನು ಸುರಿಸುವ ಮೂಲಕ ಪುಷ್ಪ ನಮನ ಸಲ್ಲಿಸಿದ್ದಾರೆ.
ಇನ್ನು ಅಯೋಧ್ಯೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ಅವರು ರಾಮನ ಪಾದಗಳಿಗೆ ಪುಷ್ಪ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರೊಂದಿಗೆ ಸೇರಿ ಆರತಿ ಬೆಳಗಿದರು. ಈ ವೇಳೆ ದೇವಾಲಯದ ಒಳಗೆ ನೆರೆದವರ ಶ್ರೀರಾಮ ಜಯರಾಮ ಎಂಬ ರಾಮನಾಮ ಮುಗಿಲುಮುಟ್ಟಿತ್ತು. ಮಂತ್ರಘೋಷಗಳು ಮೊಳಗಿದ್ದವು, ವಾದ್ಯಗಳ ನಾದ ದೇವಾಲಯವನ್ನು ಆವರಿಸಿತ್ತು.
ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗುಜರಾತ್ ಮಾಜಿ ಸಿಎಂ ಆನಂದಿ ಬೇನ್ ಪಟೇಲ್, ಇಬ್ಬರು ಪ್ರಧಾನ ಅರ್ಚಕರು ಗರ್ಭಗುಡಿಯಲ್ಲಿದ್ದರು. ಮೋದಿಯವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹವನ್ನು ಅನಾವರಣಗೊಳಿಸುತ್ತಿದ್ದಂತೆ ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟರ್ಗಳು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಾಲಯದ ಮೇಲೆ ಹೂವಿನ ಮಳೆಗೈದವು.
Such a great gesture by @narendramodi ji of thanking every worker who contributed in creating a beautiful Ram mandir of Ayodhya
Modiji ek hi dil hai
Kitne baat jitoge 🤗🤗🙏🏼 pic.twitter.com/DpcoEIG9DC— Sheetal Chopra 🇮🇳 (@SheetalPronamo) January 22, 2024