ಚಂಡೀಗಢ : ಪಂಜಾಬ್ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಗದ್ದಲದ ನಡುವೆ ನವಜೋತ್ ಸಿಂಗ್ ಸಿಧು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು ತಾನು ಹುದ್ದೆಯಲ್ಲಿರಲಿ, ಇಲ್ಲದಿರಲಿ ಆದರೆ ಯಾವತ್ತೂ ರಾಹುಲ್ ಗಾಂಧಿ ಜೊತೆಗಿರುತ್ತೇನೆ ಎಂದಿದ್ದಾರೆ.
ನವಜೋತ್ ಸಿಂಗ್ ಸಿಧು ಕಳೆದ ವಾರ ರಾಜೀನಾಮೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ನಲ್ಲಿ ತೀವ್ರ ಬಿಕ್ಕಟ್ಟು ಕಾಣಿಸಿಕೊಂಡಿದೆ. ಇದು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅದೇ ಸಮಯದಲ್ಲಿ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಾ ಹೊಸ ಪಕ್ಷ ಸ್ಥಾಪನೆ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಗೃಹ ಸಚಿವ ಅಮಿತ್ ಶಾ ಮತ್ತು ಎನ್ಎಸ್ಎ ಅಜಿತ್ ದೋವಲ್ ಅವರನ್ನು ಭೇಟಿ ಕೂಡಾ ಮಾಡಿದ್ದರು. ಹೀಗಿದ್ದರೂ ತಾನು ಬಿಜೆಪಿಗೆ ಹೋಗುತ್ತಿಲ್ಲ ಎಂದು ಅಮರೀಂದರ್ ಸ್ಪಷ್ಟಪಡಿಸಿದ್ದಾರೆ.