News Karnataka Kannada
Monday, April 29 2024
ಪಂಜಾಬ್

ಪಂಜಾಬ್ : ಕಾಂಗ್ರೆಸ್‌ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ

Navajith
Photo Credit :

ಪಂಜಾಬ್  : ಪಂಜಾಬ್ ನಲ್ಲಿ ಚರಣಜಿತ್ ಸಿಂಗ್ ಚನ್ನಿ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಪಂಜಾಬ್ ಪ್ರದೇಶ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಸಿಧು, ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಹೀಗಾಗಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವೆ. ಆದರೆ ಪಕ್ಷದಲ್ಲಿದ್ದುಕೊಂಡು ಸೇವೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಪಂಜಾಬ್ ಕಾಂಗ್ರೆಸ್​ನಲ್ಲಿ ಆಂತರಿಕ ವೈಮನಸ್ಸು ಉಂಟಾಗಿದೆ. ಸೆಪ್ಟೆಂಬರ್ 18 ರಂದು ಇದ್ದಕ್ಕಿದ್ದಂತೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಆ ಬಳಿಕ ಚರಣಜಿತ್ ಸಿಂಗ್ ಚನ್ನಿ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೂ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವಿನ ಸಮರ ಮುಂದುವರೆದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು