News Karnataka Kannada
Saturday, May 11 2024
ಪಂಜಾಬ್

  ಪಂಜಾಬ್‌: ಜಲಿಯನ್‌ ವಾಲಾಬಾಗ್‌ ಸ್ಮಾರಕಕ್ಕೆ ಅರವಿಂದ್‌ ಕೇಜ್ರಿವಾಲ್‌ರಿಂದ ಪುಷ್ಟ ನಮನ

Aravindha Kejrival
Photo Credit :

  ಪಂಜಾಬ್‌: ಪಂಜಾಬ್‌ನ ಅಮೃತಸರದಲ್ಲಿ ನಡೆಯಲಿರುವ ರೋಡ್‌ ಶೋಗೂ ಮುನ್ನ ಜಲಿಯನ್‌ ವಾಲಾಬಾಗ್‌ ಸ್ಮಾರಕಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಭೇಟಿ ನೀಡಿದರು.

ಪಂಜಾಬ್‌ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು ಪ್ರಚಂಡ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಅಮೃತಸರದಲ್ಲಿ ಮೆಗಾ ರೋಡ್‌ ಶೋ ನಡೆಸಲಿದ್ದಾರೆ.

ಸ್ಮಾರಕಕ್ಕೆ ಪುಷ್ಟ ನಮನ ಸಲ್ಲಿಸಿದ ಕೇಜ್ರಿವಾಲ್‌ಗೆ ಪಂಜಾಬ್‌ ಸಿಎಂ ಅಭ್ಯರ್ಥಿ ಭಗವಂತ ಮಾನ್‌ ಜೊತೆಯಾದರು.ಆ ಮೂಲಕ ಜನರಿಗೆ ಧನ್ಯವಾದ ತಿಳಿಸಲಿದ್ದಾರೆ ಎಂದು ಭಗವಂತ ಮಾನ್‌ ಹೇಳಿದ್ದಾರೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಕೇವಲ 18 ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಬಿಜೆಪಿ ಎರಡು ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೂರು ಕ್ಷೇತ್ರಗಳಲ್ಲಿ ಜಯ ಕಂಡಿವೆ. ಬಹುಜನ ಸಮಾಜವಾದಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಒಂದೊಂದು ಕಡೆ ಗೆಲುವು ಸಾಧಿಸಿದ್ದಾರೆ.

1919ರ ಏಪ್ರಿಲ್‌ 13ರಂದು ನಡೆದ ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡವು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿನ ಪ್ರಮುಖ ಅಧ್ಯಾಯವಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು