News Karnataka Kannada
Monday, April 29 2024
ಪಂಜಾಬ್

ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಆಯ್ಕೆ ಕಾಂಗ್ರೆಸ್‌ನ ತಪ್ಪು: ಅಮರಿಂದರ್ ಸಿಂಗ್

Amarindar Singh
Photo Credit :

 ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿರುವುದು ತಪ್ಪು , ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ, ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಹಿಂದೆಂದೂ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿಭಜನೆಯಾಗಿಲ್ಲ ಚರಣ್‌ಜಿತ್ ಸಿಂಗ್ ಚನ್ನಿಯನ್ನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ, ಆದರೆ ಜಾತಿ ಆಧಾರದಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಬಾರದು.

ಸಿಎಂ ಆಗಿದ್ದ 111 ದಿನಗಳಲ್ಲಿ ಎಲ್ಲವನ್ನೂ ಮಾಡಿದ್ದೇನೆ ಎಂದು ಚನ್ನಿ ಹೇಳಿಕೊಂಡಿದ್ದಾರೆ, ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ, ಪ್ರತಿಯೊಂದು ಯೋಜನೆಯನ್ನು ಪ್ರಾರಂಭಿಸಲು ತಿಂಗಳುಗಳು ಬೇಕಾಗುತ್ತದೆ, ಈ ಕುರಿತು ಜನರು ಎಚ್ಚರವಾಗಿರಬೇಕು, ಚನ್ನಿ ಹೇಳಿರುವ ಎಲ್ಲಾ ಯೋಜನೆಗಳು ನಮ್ಮ ಸರ್ಕಾರದಿಂದ ಆರಂಭವಾಗಿತ್ತು ಎಂದರು.

ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ನಿರ್ಧಾರ ನನ್ನ ನಿರ್ಧಾರವಲ್ಲ ಎಂದು ಹೇಳಿದ ರಾಹುಲ್. “ನಾನು ಅದರ ಬಗ್ಗೆ ನಿರ್ಧರಿಸಿಲ್ಲ, ನಾನು ಇದನ್ನು ಪಂಜಾಬ್‌ನ ಜನರು, ಯುವಕರು, ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಕೇಳಿದೆ.

ನನಗೆ ಅಭಿಪ್ರಾಯವಿರಬಹುದು ಆದರೆ ನನ್ನ ಅಭಿಪ್ರಾಯಕ್ಕಿಂತ ನಿಮ್ಮ ಅಭಿಪ್ರಾಯ ಮುಖ್ಯ. ಬಡವರನ್ನು ಅರ್ಥಮಾಡಿಕೊಳ್ಳಬಲ್ಲ ವ್ಯಕ್ತಿಯೊಬ್ಬರು ನಮಗೆ ಬೇಕು ಎಂದು ಅವರು ಹೇಳಿದ್ದರು ಎಂದು ಚನ್ನಿ ಹೆಸರು ಘೋಷಣೆ ಮಾಡಿ ಭಾಷಣ ಮಾಡಿದ ರಾಹುಲ್ ಹೇಳಿದ್ದಾರೆ.

ಟೆಲಿಪೋಲ್ ಮತ್ತು ನಂತರದ ಘೋಷಣೆಯು ಮುಖ್ಯಮಂತ್ರಿ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಧು ನಡುವಿನ ಜಗಳದ ಫಲಿತಾಂಶವಾಗಿದೆ. ಅವರು 2017 ರಲ್ಲಿ ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದಾಗಿನಿಂದ ತಮ್ಮ ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸಿದ್ದಾರೆ.

ಜನವರಿ 27 ರಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಸಾಮಾನ್ಯವಾಗಿ, ನಾವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಆದರೆ ಕಾಂಗ್ರೆಸ್ ಕಾರ್ಯಕರ್ತರು ಬಯಸಿದರೆ, ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ನಾವು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚಿಸುತ್ತೇವೆ, ಅವರು ನಿರ್ಧರಿಸುತ್ತಾರೆ ಎಂದು ಹೇಳಿದ್ದರು.

ಇದಾದ ನಂತರವೂ ಸಿಧು ಚನ್ನಿ ಮೇಲೆ ತಮ್ಮ ದಾಳಿಯನ್ನು ಮುಂದುವರೆಸಿದರು. ಶುಕ್ರವಾರ, ಮುಖ್ಯಮಂತ್ರಿಯ ಸಂಬಂಧಿಕರ ಮೇಲಿನ ದಾಳಿಗಳನ್ನು ಉಲ್ಲೇಖಿಸುವಾಗ, ಪಕ್ಷವು “ಪ್ರಾಮಾಣಿಕ ಮತ್ತು ಕ್ಲೀನ್ ಟ್ರ್ಯಾಕ್ ರೆಕಾರ್ಡ್” ಅನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು. ಯಾವುದೇ ಮುಖ್ಯಮಂತ್ರಿ ಆಯ್ಕೆಗೆ ಕನಿಷ್ಠ 60 ಶಾಸಕರ ಬೆಂಬಲ ಇರಬೇಕು ಎಂದು ಅವರು ಹೇಳಿದರು.

ಕಳೆದ ವರ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸಿಧು ನೇತೃತ್ವದ ಬಂಡಾಯ ಶಾಸಕರ ಗುಂಪಿನೊಂದಿಗೆ ಒಂದು ವರ್ಷದ ಜಗಳದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಸಿಧು ಅವರು ತಮ್ಮ ಅಪೇಕ್ಷಿತ ಗುರಿಯನ್ನು ತಲುಪಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು