News Karnataka Kannada
Thursday, May 02 2024
ಪಂಜಾಬ್

ಪಟಿಯಾಲ ನ್ಯಾಯಾಲಯಕ್ಕೆ ಇಂದು ಶರಣಾಗಲಿರುವ ನವಜೋತ್ ಸಿಂಗ್ ಸಿಧು

Navjot Singh Sidhu
Photo Credit :

ಚಂಡೀಗಡ: ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಇಂದು ಪಟಿಯಾಲದ ಸ್ಥಳೀಯ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ. 1988ರಲ್ಲಿ 65 ವರ್ಷ ವಯಸ್ಸಿನ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ಸಿಧು ಅವರಿಗೆ ಒಂದು ವರ್ಷ ಕಠಿಣ ಸಜೆ ವಿಧಿಸಿತ್ತು.

ಬೆಳಗ್ಗೆ 10 ಗಂಟೆ ಸುಮಾರಿಗೆ ಸಿಧು ನ್ಯಾಯಾಲಯಕ್ಕೆ ಬರಲಿದ್ದಾರೆ ಎಂದು ಪಟಿಯಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾರಿಂದರ್ ಪಾಲ್ ಹೇಳಿದ್ದಾರೆ. ಗುರುವಾರ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಶಿಕ್ಷೆ ವಿಧಿಸಿದ ಬಳಿಕ ಅವರ ಪತ್ನಿ ನವಜೋತ್ ಕೌರ್ ಸಿಧು ಸಹ ರಾತ್ರಿ 9.45ರ ಸುಮಾರಿಗೆ ಅಮೃತಸರಕ್ಕೆ ಆಗಮಿಸಿದ್ದಾರೆ.

‘ಅಪರಾಧಿಗೆ ಶಿಕ್ಷೆ ವಿಧಿಸುವಾಗ ತೋರುವ ಯಾವುದೇ ಅನುಚಿತ ಸಹಾನುಭೂತಿಯು ನ್ಯಾಯ ವ್ಯವಸ್ಥೆಗೆ ಹೆಚ್ಚು ಹಾನಿ ಮಾಡುತ್ತದೆ ಮತ್ತು ಕಾನೂನಿನ ಪರಿಣಾಮಕತ್ವದ ಬಗ್ಗೆ ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುತ್ತದೆ’ ಎಂದು ಗುರುವಾರ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತ್ತು.

65 ವರ್ಷದ ವ್ಯಕ್ತಿಗೆ ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಅಪರಾಧಕ್ಕಾಗಿ ಸಿಧು ಅವರನ್ನು ಮೇ 2018ರಲ್ಲಿ ತಪ್ಪಿತಸ್ಥರೆಂದು ಕೋರ್ಟ್ ಪರಿಗಣಿಸಿದ್ದರೂ ಸಹ ಅವರಿಗೆ ಜೈಲು ಶಿಕ್ಷೆ ನೀಡದೆ ಕೇವಲ ₹ 1,000 ದಂಡ ವಿಧಿಸಲಾಗಿತ್ತು ಎಂದು ನ್ಯಾಯಾಲಯ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು