News Karnataka Kannada
Thursday, May 02 2024
ಪಂಜಾಬ್

ಭಗತ್‌ ಸಿಂಗ್‌ ಹುಟ್ಟೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್‌ ನೂತನ ಸಿಎಂ

Punjab
Photo Credit : News Kannada

ಕ್ರಾಂತಿಕಾರಿ ಭಗತ್‌ ಸಿಂಗ್‌ ಅವರ ಹುಟ್ಟೂರು ಖಟ್ಕರ್‌ ಕಾಲನ್‌ ಗ್ರಾಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ, ರಾಜಭವನದಲ್ಲಿ ಅಲ್ಲ ಎಂದು ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಘೋಷಣೆಯಾಗಿರುವ ಭಗವಂತ್‌ ಸಿಂಗ್‌ ಮಾನ್‌ ಘೋಷಿಸಿಕೊಂಡಿದ್ದಾರೆ.

ಆಮ್‌ ಆದ್ಮಿ ಪಕ್ಷವು ಪಂಜಾಬ್‌ ನ 117 ವಿಧಾನಸಭಾ ಕ್ಷೇತ್ರಗಳಲ್ಲಿ91 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿದೆ. ಭಗವಂತ್‌ ಸಿಂಗ್‌ ಮಾನ್‌ ೫೮,೨೦೬ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಂಗ್ರೂರ್‌ ನಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಅವರು ಕಾರ್ಯಕರ್ತರೊಂದಿಗೆ ಮಾತನಾಡಿದರು.

ಪ್ರಮಾಣ ವಚನ ಸ್ವೀಕಾರ ದಿನಾಂಕ ಶೀಘ್ರವೇ ಘೋಷಿಸುತ್ತೇವೆ. ಇನ್ನು ಮುಂದೆ ಪಂಜಾಬ್‌ ಸರ್ಕಾರಿ ಕಚೇರಿಗಳಲ್ಲಿ ಭಗತ್‌ ಸಿಂಗ್‌ ಮತ್ತು ಬಾಬಾ ಸಾಹೇಬ್‌  ಅಂಬೇಡ್ಕರ್‌ ಭಾವಚಿತ್ರಗಳು ಮಾತ್ರವೇ ಇರುತ್ತವೆ ಎಂದು ಮಾನ್ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು