ಚಂಡಿಗಢ : ಪಂಜಾಬ್ನಲ್ಲಿರುವ ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ಉಗ್ರರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಮದ್ದು,ಗುಂಡು, ಸಶಸ್ತ್ರಗಳು ಹಾಗೂ ಮಾದಕ ದ್ರವ್ಯ ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಗಿದೆ. 22 ಪಿಸ್ತೂಲ್ಗಳು, 44 ಮ್ಯಾಗಜಿನ್ಗಳು, 100 ಸುತ್ತು ಸ್ಪೋಟಕ ವಸ್ತುಗಳು ಹಾಗೂ ಒಂದು ಕೇಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.
ತರ್ನ್ ತರನ್ ಜಿಲ್ಲೆಯ ಖೇಮ್ಕಾರನ್ ಪ್ರದೇಶದ ಗಡಿ ಪ್ರದೇಶದಲ್ಲಿ ಉಗ್ರರು ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಚರಣೆ ನಡೆಸಿದ ಭದ್ರತಾ ಪಡೆಗಳು ಹಾಗೂ ಪಂಜಾಬ್ ಪೊಲೀಸರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಯಾವ ಸಂಘಟನೆಗೆ ಸೇರಿದ ಉಗ್ರರು ಸ್ಪೋಟಕಗಳನ್ನು ಅಡಗಿಸಿಟ್ಟಿದ್ದರು ಎಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ನೆರೆಯ ಪಾಕ್ನಿಂದ ಕಳ್ಳಸಾಗಾಣಿಕೆ ಮೂಲಕ ಹಾಗೂ ಮಾದಕ ದ್ರವ್ಯಗಳನ್ನು ಗಡಿಯೊಳಗೆ ಸಾಗಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಉಗ್ರರ ಬಂಧನಕ್ಕೆ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಕಾಶ್ಮೀರ ಕಣಿವೆಯ ಗಡಿಗಳಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿರುವ ಹಿನ್ನಲೆಯಲ್ಲಿ ಪಂಜಾಬ್ ಗಡಿ ಮೂಲಕ ವಿಧ್ವಂಸಕ ವಸ್ತುಗಳನ್ನು ಭಾರತದೊಳಗೆ ಸಾಗಿಸಲು ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…