News Karnataka Kannada
Sunday, April 28 2024
ಪಂಜಾಬ್

ವರದಕ್ಷಿಣೆ ಕಿರುಕುಳ: ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದ ಪತಿ

Photo Credit : IANS

ಲೂಧಿಯಾನ: ವರದಕ್ಷಿಣೆ ಕಿರುಕುಳ ನೀಡಿದ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ನಗರದ ಸರಭನಗರ ನಿವಾಸಿ ಅಜಯ್‌ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ.

ಲೂಧಿಯಾನದ ಪಖೋವಾಲ್ ರಸ್ತೆಯಲ್ಲಿರುವ ವಿಕಾಸ್ ನಗರದ ಅವರ ಪತ್ನಿ 31 ವರ್ಷದ ಸಿಮ್ರಾನ್‌ ಪ್ರೀತ್ ಕೌರ್ ಅವರ ದೂರಿನ ಮೇರೆಗೆ ಅಜಯ್‌ ಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೂರು ವರ್ಷದ ಮಗಳಿದ್ದಾಳೆ ಎಂದು ದೂರುದಾರರು ತಿಳಿಸಿದ್ದಾರೆ.

ಸಿಮ್ರಾನ್‌ ಪ್ರೀತ್ ಕೌರ್ ಅವರು ಅಜಯ್‌ಪಾಲ್ ಸಿಂಗ್ ಅವರನ್ನು ಮದುವೆಯಾದ ನಂತರದಲ್ಲಿ ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದ, ಗಂಡನ ಮನೆ ಬಿಟ್ಟು ಹೋಗುವಂತೆ ಒತ್ತಾಯಿಸಿದ್ದ. ಆಕೆ ತನ್ನ ಮಗಳೊಂದಿಗೆ ವಿಕಾಸ್ ನಗರದಲ್ಲಿರುವ ಅತ್ತೆಯ ಮನೆಗೆ ತೆರಳಿದ್ದಳು ಎಂದು ವರದಿಯಾಗಿದೆ.

ಮೇ 23ರಂದು ಆಕೆ ಅಡುಗೆ ಮಾಡುತ್ತಿದ್ದಾಗ ಅಜಯ್‌ ಪಾಲ್‌ ಬಂದು ಬಾಣಲೆಯಿಂದ ಕಾದ ಎಣ್ಣೆ ತೆಗೆದುಕೊಂಡು ಆಕೆಯ ಮೇಲೆ ಸುರಿದಿದ್ದಾನೆ. ಆಕೆ ಸಹಾಯಕ್ಕಾಗಿ ಕಿರುಚಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರುದಾರರು ತಿಳಿಸಿದ್ದಾರೆ.

ಘಟನೆ ಬಳಿಕ ಮಹಿಳೆಯ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಕೆಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ನಂತರ ಮಹಿಳೆ ಮೇ 24 ರಂದು ಮಹಿಳಾ ಸಹಾಯವಾಣಿಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿಂದೆ ತನ್ನ ಪತಿ ವಿರುದ್ಧ ಕೌಟುಂಬಿಕ ಹಿಂಸೆ ದೂರು ದಾಖಲಿಸಿದ್ದ ಸಿಮ್ರಾನ್ ಅವರ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ ಎಂದು ಶಹೀದ್ ಭಗತ್ ಸಿಂಗ್ ನಗರ ಪೊಲೀಸ್ ಪೋಸ್ಟ್‌ ನ ಪ್ರಭಾರಿ ಸಹಾಯಕ ಸಬ್ ಇನ್ಸ್‌ ಪೆಕ್ಟರ್ ಧರ್ಮಿಂದರ್ ಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು