ನವದೆಹಲಿ : ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ಭಗವಂತ ಮಾನ್ ಅವರು ಲೋಕಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು.
ಲೋಕಸಭಾ ಸಭಾಪತಿ ಓಂ ಬಿರ್ಲಾ ಅವರಿಗೆ ಭಗವಂತ ಮಾನ್ ರಾಜೀನಾಮೆ ಸಲ್ಲಿಸಿದರು. ಮಾನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ವಗ್ರಾಮವಾದ ಖಟಕಡಕಲಾನ್ನಲ್ಲಿ ಮಾರ್ಚ್ 16 ರಂದು ಪಂಜಾಬ್ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯದ 3 ಕೋಟಿ ಜನರನ್ನು ಮಾನ್ ಆಹ್ವಾನಿಸಿದ್ದಾರೆ. ವಿಡಿಯೊವೊಂದನ್ನು ಹಂಚಿಕೊಂಡಿರುವ ಅವರು, ‘ನಾನಷ್ಟೇ ಅಲ್ಲ, ನನ್ನೊಂದಿಗೆ ರಾಜ್ಯದ 3 ಕೋಟಿ ಜನರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ ಎಂದಿದ್ದಾರೆ.
‘ನಿಮ್ಮ ಸೋದರನನ್ನು ಹರಸಲು, ಪ್ರೋತ್ಸಾಹಿಸಲು ಬನ್ನಿ….16ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಖಟಕಡಕಲಾನ್ಗೆ ಬನ್ನಿ..’ ಎಂದು ಪಂಜಾಬ್ ಜನರಿಗೆ ಮಾನ್ ಆಹ್ವಾನ ನೀಡಿದ್ದಾರೆ.
ਆਓ ਸਾਰੇ ਰਲ਼ ਕੇ ਸ਼ਹੀਦ ਭਗਤ ਸਿੰਘ ਜੀ ਦੇ ਸੁਪਨਿਆਂ ਦਾ ਪੰਜਾਬ ਸਿਰਜੀਏ, 16 ਮਾਰਚ, ਬੁੱਧਵਾਰ ਨੂੰ ਖਟਕੜ ਕਲਾਂ ਵਿਖੇ ਸਹੁੰ ਚੁੱਕ ਸਮਾਗਮ ਵਿੱਚ ਪਹੁੰਚ ਦਾ ਤੁਹਾਨੂੰ ਸਭ ਨੂੰ ਸੱਦਾ ਦਿੰਦਾ ਹਾਂ। pic.twitter.com/xYBWeAXLLv
— Bhagwant Mann (@BhagwantMann) March 14, 2022
ಭಗವಂತ ಮಾನ್ ಅವರು ಅಮೃತಸರದಲ್ಲಿ ಭಾನುವಾರ ರೋಡ್ ಶೋ ನಡೆಸಿ, ಪಕ್ಷದ ಗೆಲುವನ್ನು ಸಂಭ್ರಮಿಸಿದರು. 117 ಸದಸ್ಯಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಕಡೆಗಳಲ್ಲಿ ಗೆಲುವು ಸಾಧಿಸಿತ್ತು.