ಪಂಜಾಬ್: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಪಂಜಾಬ್ನಲ್ಲಿ ಮರಳು ಮಾಫಿಯಾ ಅಡ್ಡೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದಾಳಿ ಮಾಡಿದೆ.ಪ್ರಮುಖವಾಗಿ ಇ.ಡಿ ಅಧಿಕಾರಿಗಳು ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರ ಅಳಿಯ ಭೂಪೆಂದ್ರ ಸಿಂಗ್ ಹನಿ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.
ಚುನಾವಣೆಯ ಹಿನ್ನೆಲೆಯಲ್ಲಿ ಹಣ ಅಕ್ರಮ ವರ್ಗಾವಣೆಯ ದೂರುಗಳು ಬಂದಿದ್ದರಿಂದ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.ಹಣ ಅಕ್ರಮ ವರ್ಗಾವಣೆ ಹಾಗೂ ಕಾನೂನು ಬಾಹಿರ ಮರಳು ದಂಧೆಯಲ್ಲಿ ಅವರ ಹೆಸರು ಕೇಳಿ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ನ 10 ರಿಂದ 12 ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದ್ದು, ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ವಶಕ್ಕೆ ತೆಗೆದುಕೊಂಡವರಲ್ಲಿ ಬಹುತೇಕರು ರಾಜಕೀಯ ನಾಯಕರ ಜೊತೆ ನಂಟು ಹೊಂದಿದ್ದಾರೆ ಎನ್ನಲಾಗಿದೆ.