ನವದೆಹಲಿ: ಕಾಂಗ್ರೆಸ್ ಪಕ್ಷ ತೊರೆಯಲು ತುದಿಗಾಲಿನ ಮೇಲೆ ನಿಂತಿರುವ ಹಿರಿಯ ನಾಯಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ನವಜೋತ್ ಸಿಂಗ್ ಸಿಧು ಅವರ ವಿರುದ್ಧ ಬಹಿರಂಗ ಸಮರ ಸಾರಿದ್ದಾರೆ.
ಇಂದು ಮಾಧ್ಯಮಗಳ ಎದುರು ಮಾತನಾಡಿದ ಕ್ಯಾಪ್ಟನ್, ಸಿಧು ವಿರುದ್ಧ ವಾಗ್ದಾಳಿ ನಡೆಸಿದರು. ಸಿಧು ರಾಜ್ಯಕ್ಕೆ ತಕ್ಕನಾದ ವ್ಯಕ್ತಿಯಲ್ಲ. ಆತ ಮುಂದಿನ ಚುನಾವಣೆಯಲ್ಲಿ ಎಲ್ಲೇ ಸ್ಪರ್ಧಿಸಿದರೂ ಆತನನ್ನು ಸೋಲಿಸುತ್ತೇನೆ. ಆತ ಗೆಲ್ಲಲು ನಾನು ಬಿಡುವುದಿಲ್ಲ ಎಂದಿದ್ದಾರೆ