ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯದ ಜನರಿಗೆ ನೀಡಿದ ಮತ್ತೊಂದು ಭರವಸೆಯನ್ನು ಈಡೇರಿಸಿದ್ದು, ತಮ್ಮ ವೃತ್ತಿಪರ ಕೌಶಲ್ಯವನ್ನು ಮತ್ತಷ್ಟು ತೀಕ್ಷ್ಣಗೊಳಿಸಲು ಸಿಂಗಾಪುರಕ್ಕೆ ಭೇಟಿ ನೀಡಲಿರುವ 36 ಪ್ರಾಂಶುಪಾಲರ ಮೊದಲ ಬ್ಯಾಚ್ ಅನ್ನು ಗುರುವಾರ ಪ್ರಕಟಿಸಿದ್ದಾರೆ.
ಜನರೊಂದಿಗಿನ ಆನ್ಲೈನ್ ಸಂವಾದದಲ್ಲಿ ಮುಖ್ಯಮಂತ್ರಿ, ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿವರ್ತಿಸಲಾಗುವುದು ಎಂದು ಜನರಿಗೆ ಭರವಸೆ ನೀಡಿದ್ದರು ಎಂದು ಹೇಳಿದರು.
ಶಿಕ್ಷಕರು ಶಿಕ್ಷಣದ ಮಟ್ಟವನ್ನು ಉನ್ನತೀಕರಿಸಬಲ್ಲ ರಾಷ್ಟ್ರ ನಿರ್ಮಾತೃಗಳಾಗಿರುವುದರಿಂದ, ಅವರಿಗೆ ಗುಣಮಟ್ಟದ ತರಬೇತಿಯನ್ನು ಖಾತ್ರಿಪಡಿಸುವ ಮೂಲಕ ಅವರ ಬೋಧನಾ ಕೌಶಲ್ಯವನ್ನು ಉನ್ನತೀಕರಿಸಲಾಗುವುದು ಎಂದು ಅವರು ಹೇಳಿದರು.
ಈ ಖಾತರಿಯ ಭಾಗವಾಗಿ 36 ಸರ್ಕಾರಿ ಶಾಲಾ ಪ್ರಾಂಶುಪಾಲರ ಮೊದಲ ಬ್ಯಾಚ್ ಫೆಬ್ರವರಿ 4 ರಂದು ವೃತ್ತಿಪರ ತರಬೇತಿಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ಭಗವಂತ್ ಮಾನ್ ಹೇಳಿದರು.
ಈ ಪ್ರಾಂಶುಪಾಲರು ಫೆಬ್ರವರಿ6 ರಿಂದ ವೃತ್ತಿಪರ ಶಿಕ್ಷಕರ ತರಬೇತಿ ಸೆಮಿನಾರ್ ನಲ್ಲಿ ಭಾಗವಹಿಸಲಿದ್ದಾರೆ. ಅವರು ಫೆಬ್ರವರಿ 11ರಂದು ಹಿಂತಿರುಗಲಿದ್ದಾರೆ.
ಸಿಂಗಾಪುರದ ಹೆಚ್ಚುವರಿ ಪರಿಣತಿಯೊಂದಿಗೆ ಈ ಪ್ರಾಂಶುಪಾಲರು ರಾಜ್ಯದಲ್ಲಿ ನೀಡಲಾಗುತ್ತಿರುವ ಶಿಕ್ಷಣದ ಮಟ್ಟವನ್ನು ಮೇಲ್ದರ್ಜೆಗೇರಿಸುವುದರಿಂದ ರಾಜ್ಯದಾದ್ಯಂತದ ಲಕ್ಷಾಂತರ ವಿದ್ಯಾರ್ಥಿಗಳು ಈ ಕ್ರಮದಿಂದ ಪ್ರಯೋಜನ ಪಡೆಯುತ್ತಾರೆ ಎಂದು ಭಗವಂತ್ ಮಾನ್ ಅಭಿಪ್ರಾಯಪಟ್ಟರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ