News Karnataka Kannada
Sunday, May 05 2024
ಪಂಜಾಬ್

ಪಂಜಾಬ್: ನಾಳೆ ಚಂಡೀಗಢದ ನಿವಾಸದಲ್ಲಿ ಸಪ್ತಪದಿ ತುಳಿಯಲಿದ್ದಾರೆ ಮುಖ್ಯಮಂತ್ರಿ ಭಗವಂತ್​ ಮಾನ್!

Chandigarh Chief Minister Bhagwant Mann to tie the knot tomorrow at his residence in Chandigarh.
Photo Credit :

ಪಂಜಾಬ್ : ಮುಖ್ಯಮಂತ್ರಿ ಭಗವಂತ್​ ಮಾನ್ ನಾಳೆ ಚಂಡೀಗಢದ ತಮ್ಮ ನಿವಾಸದಲ್ಲಿ ಸಪ್ತಪದಿ ತುಳಿಯಲಿದ್ದಾರೆ.                ಡಾ. ಗುರುಪ್ರಿತ್ ಕೌರ್​ ಜೊತೆ ಖಾಸಗಿ ಸಮಾರಂಭದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ 2ನೇ ಮದುವೆಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ, ಆಪ್​ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಭಾಗಿಯಾಗಲಿದ್ದಾರೆ.

ಭಗವಂತ್ ಮಾನ್​ ಈಗಾಗಲೇ 2015ರಲ್ಲಿ ಇಂದ್ರಪ್ರೀತ್ ಕೌರ್ ಜೊತೆ ಮದುವೆ ಮಾಡಿಕೊಂಡಿದ್ದರು. ಆದರೆ, ಆರು ವರ್ಷಗಳ ಹಿಂದೆ ಅವರೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ.

ಡಾ. ಗುರುಪ್ರೀತ್ ಕೌರ್​ ಎಂಬಿಬಿಎಎಸ್​​ ಪದವೀಧರೆ ಆಗಿದ್ದು, ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆಂದು ತಿಳಿದು ಬಂದಿದೆ. ಭಗವಂತ್ ಮಾನ್​​ ಅವರ ತಾಯಿ ಹಾಗೂ ಸಹೋದರಿ ಸೇರಿಕೊಂಡು ವಧುವಿನ ಆಯ್ಕೆಮಾಡಿದ್ದಾರಂತೆ.

ಆರು ವರ್ಷಗಳ ಹಿಂದೆ ಭಗವಂತ್ ಮಾನ್​ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದು, ಸದ್ಯ ಅವರು ಅಮೆರಿಕಾದಲ್ಲಿ ಎರಡು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದಾರೆ. ಭಗವಂತ್ ಮಾನ್​ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು