News Karnataka Kannada
Monday, May 06 2024
ಪಂಜಾಬ್

ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
Photo Credit : NewsKarnataka

ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಸರಬ್ಜಿತ್ ಸಿಂಗ್ ಖಾಲ್ಸಾ (45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ. ಇವರು ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ.

2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅವರು ಅನುಕ್ರಮವಾಗಿ ಫತೇಘರ್ ಸಾಹಿಬ್ ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2019 ರಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿದ್ದರು.

2014ರಲ್ಲಿ ಸರಬ್ಜಿತ್, ಚುನಾವಣಾ ಅಫಿಡವಿಟ್‌ನಲ್ಲಿ 3.5 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಅವರ ತಾಯಿ ಬಿಮಲ್ ಕೌರ್ ಮತ್ತು ಅವರ ಅಜ್ಜ ಸುಚಾ ಸಿಂಗ್ 1989 ರಲ್ಲಿ ಸಂಸದರಾಗಿದ್ದರು. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ನಿವಾಸದಲ್ಲಿ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್, ಪ್ರಧಾನಿಯನ್ನು ಗುಂಡಿಕ್ಕಿ ಕೊಂದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು