ಪಂಜಾಬ್: ಉಗ್ರ ಗುರು ಪತ್ವಂತ್ ಸಿಂಗ್ ಪನ್ನು, ಗಣರಾಜ್ಯೋತ್ಸವದ ದಿನದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.
ಗ್ಯಾಂಗ್ಸ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಡಿಜಿಪಿ ಗೌರವ್ ಯಾದವ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಪಂಜಾಬ್ ಪೊಲೀಸರು ದರೋಡೆಕೋರರ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡಿದ್ದಾರೆ.
ರಾಮ ಮಂದಿರ ಶಂಕು ಸ್ಥಾಪನೆ ಕುರಿತು ಪನ್ನು ಹೇಳಿಕೆ ನೀಡಿದ್ದ ಒಂದು ವಾರದ ಬಳಿಕವಷ್ಟೇ ಈ ಹೇಳಿಕೆ ಬಹಿರಂಗವಾಗಿದೆ.