ನವದೆಹಲಿ: ಮೋದಿ ಉಪನಾಮದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
ರಾಹುಲ್ ಗಾಂಧಿ ಹೇಳಿಕೆಯಲ್ಲಿ ಉತ್ತಮ ಅಭಿರುಚಿಯಿಲ್ಲ ಎಂಬುದರಲ್ಲಿ ಸಂದೇಹವಿಲ್ಲ. ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರಿಕೆ ವಹಿಸಬೇಕು. ರಾಹುಲ್ ಗಾಂಧಿ ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಮಧ್ಯಂತರ ಆದೇಶ ನೀಡುವಾಗ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಂತಿಮ ತೀರ್ಪಿನವರೆಗೆ ಅಪರಾಧದ ಆದೇಶವನ್ನು ತಡೆಹಿಡಿಯಬೇಕಾಗಿದೆ ಎಂದು ಸುಪ್ರೀಂ ಹೇಳಿದೆ.