ಗುವಾಹಟಿ: ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆಯಲ್ಲಿ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆಗಳಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತ ವಿಡಿಯೋ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಕುರಿತ ವಿಡಿಯೋವೊಂದನ್ನು ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ, ರಾಹುಲ್ ಗಾಂಧಿ ತಾಳ್ಮೆ ಕಳೆದುಕೊಳ್ಳಬಾರದು. ಶ್ರೀರಾಮ ಎಂದು ಕೂಗಿದರೆ ಅವರಿಗೆ ಅಲರ್ಜಿ ಎಂದು ಕೇಳಿದ್ದಾರೆ. ಈ ವಿಡಿಯೋದಲ್ಲಿ ಬಿಜೆಪಿ ಭಾವುಟಗಳೊಂದಿಗೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ.
ಈ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ, ಇದನ್ನೇ ನಿಭಾಯಿಸದವರು ಮುಂದೆ ದೇಶದ ಜನರನ್ನು ಹೇಗೆ ರಾಹುಲ್ ಗಾಂಧಿ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ ಮಾಳವೀಯಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಶ್ರಿನಾಟೆ, ರಾಹುಲ್ ಗಾಂಧಿ ತಾಳ್ಮೆ ಕಳೆದುಕೊಂಡಿಲ್ಲ. ಘೋಷಣೆ ಕೂಗುತ್ತಿದ್ದ ಜನರ ಬಳಿ ಮಾತನಾಡಲು ತೆರಳುತ್ತಿದ್ದಾಗ ಗುಂಪು ಅಲ್ಲಿಂದ ತೆರಳಿದೆ. ಅದನ್ನು ಅವರು ಧೈರ್ಯದಿಂದ ಮಾಡಿದ್ದಾರೆ. ಬಿಜೆಪಿಯವರು ಅರ್ಥಮಾಡಿಕೊಂಡಿಲ್ಲ. ಈಗ ಬಾಯಿಮುಚ್ಚಿಕೊಂಡು, ಕುಳಿತಿದ್ದಾರೆ ಎಂದು ಹೇಳಿದ್ದಾರೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.