ಜೈಪುರ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ 3 ರಾಜ್ಯಗಳಲ್ಲಿ 2 ರಾಜ್ಯಗಳಲ್ಲಿ ಅಚ್ಚರಿಯ ರೀತಿಯಲ್ಲಿ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಿದೆ. ಇಂದು ರಾಜಸ್ಥಾನದಲ್ಲೂ ಶಾಸಕಾಂಗ ಸಭೆ ನಡೆಯಲಿದ್ದು, ಇಲ್ಲೂ ಹೊಸ ಮುಖಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮೂಲಕ 2 ಬಾರಿಯ ಮುಖ್ಯಮಂತ್ರಿ, ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರನ್ನು ಕೈಬಿಡಬಹುದು ಎಂದು ಹೇಳಲಾಗಿದೆ.
ರಾಜಸ್ಥಾನದಲ್ಲಿ ಈಗಾಗಲೇ ಯೋಗಿ ಬಾಲಕನಾಥ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ರಾಮ್ ಮೇಘ್ವಾಲ್, ಜೈಪುರದ ರಾಣಿ ದಿಯಾ ಕುಮಾರಿ ಮುಖ್ಯಮಂತ್ರಿ ರೇಸ್ನಲ್ಲಿದ್ದಾರೆ.
ಈ ಮೊದಲು ಛತ್ತೀಸ್ಗಢದಲ್ಲಿ ವಿಷ್ಣುದೇವ್ ಮತ್ತು ಮಧ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಬಿಜೆಪಿ ಘೋಷಣೆ ಮಾಡಿತ್ತು. ಈ 2 ರಾಜ್ಯಗಳಲ್ಲಿ ಹೊಸಬರನ್ನು ಸಿಎಂ ಮಾಡಿರುವುದರಿಂದ ರಾಜಸ್ಥಾನದಲ್ಲೂ ಇದೇ ಮಾದರಿ ಅನುಸರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.