News Karnataka Kannada
Sunday, April 28 2024
ರಾಜಸ್ಥಾನ

ಕರ್ನಾಟಕದ ಶಿಲ್ಪಾ, ರಶ್ಮಿ, ಸುಪ್ರೀತಾ, ಕಾವ್ಯಾಗೆ ಮಿಸೆಸ್ ಇಂಡಿಯಾ ಕಿರೀಟ

New Project (15)
Photo Credit :

ಜೈಪುರ: ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

ಮಿಸೆಸ್ ಇಂಡಿಯಾ ಐ ಆಮ್ ಪವರ್ ಫುಲ್ ಯೂನಿವರ್ಸ್ ವಿಭಾಗದ ಕಿರೀಟವನ್ನು ಶಿಲ್ಪಾ ಗೆದ್ದುಕೊಂಡರೆ, ಐ ಆಮ್ ಪವರ್ ಫುಲ್ ವಲ್ರ್ಡ್ ವಿಭಾಗದಲ್ಲಿ ರಶ್ಮಿ, ಏಷ್ಯಾ ವಿಭಾಗದಲ್ಲಿ ಸುಪ್ರೀತಾ, ಕರ್ವಿ ವಲ್ರ್ಡ್ ವಿಭಾಗದಲ್ಲಿ ಕಾವ್ಯ ಕಿರೀಟ ಜಯಿಸಿದರು. ಅಂತೆಯೇ ನಿರ್ಮಲಾ, ಹೇಮಾ, ಸ್ನೇಹ, ಸಿಂಧು ರನ್ನರ್ ಅಪ್ ಆದರು.

ನಂದಿನಿ ನಾಗರಾಜ್ ಹಾಗೂ ಜಸ್ಪ್ರೀತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ 10 ರೂಪದರ್ಶಿಯರ ತಂಡ ಜೈಪುರಕ್ಕೆ ತೆರಳಿತ್ತು. ಒಟ್ಟು 40 ಸ್ಪರ್ಧಿಗಳು ಭಾಗವಹಿಸಿದ್ದರು. ವಿಂಟೇಜ್, ಗೌನ್, ಎಥ್‍ನಿಕ್, ಟ್ಯಾಲೆಂಟ್ ಸುತ್ತುಗಳಲ್ಲಿ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು.

“ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿದ್ದ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ತೆಳ್ಳಗೆ, ಬೆಳ್ಳಗೆ ಇರುವವರು, ಎತ್ತರ, ದಪ್ಪ, ವಯಸ್ಸನ್ನು ನೋಡಿ ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಅವರಿಗೆ ಇರುವ ಅರ್ಹತೆ ಹಾಗೂ ಆತ್ಮವಿಶ್ವಾಸವೇ ನಮ್ಮ ಸ್ಪರ್ಧೆಯ ಮಾನದಂಡವಾಗಿತ್ತು’ ಎಂದು ಆಯೋಜಕಿ ನಂದಿನಿ ನಾಗರಾಜ್ ಹೇಳಿದರು.

ಬೆಂಗಳೂರಿನ ತಂಡ ಜೈಪುರದಲ್ಲಿ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ತಂಡ ಮುಂದಿನ ವರ್ಷ ಸಿಂಗಪುರದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು