ಕರ್ನಾಟಕದ ಶಿಲ್ಪಾ, ರಶ್ಮಿ, ಸುಪ್ರೀತಾ, ಕಾವ್ಯಾಗೆ ಮಿಸೆಸ್ ಇಂಡಿಯಾ ಕಿರೀಟ

ಜೈಪುರ: ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

ಮಿಸೆಸ್ ಇಂಡಿಯಾ ಐ ಆಮ್ ಪವರ್ ಫುಲ್ ಯೂನಿವರ್ಸ್ ವಿಭಾಗದ ಕಿರೀಟವನ್ನು ಶಿಲ್ಪಾ ಗೆದ್ದುಕೊಂಡರೆ, ಐ ಆಮ್ ಪವರ್ ಫುಲ್ ವಲ್ರ್ಡ್ ವಿಭಾಗದಲ್ಲಿ ರಶ್ಮಿ, ಏಷ್ಯಾ ವಿಭಾಗದಲ್ಲಿ ಸುಪ್ರೀತಾ, ಕರ್ವಿ ವಲ್ರ್ಡ್ ವಿಭಾಗದಲ್ಲಿ ಕಾವ್ಯ ಕಿರೀಟ ಜಯಿಸಿದರು. ಅಂತೆಯೇ ನಿರ್ಮಲಾ, ಹೇಮಾ, ಸ್ನೇಹ, ಸಿಂಧು ರನ್ನರ್ ಅಪ್ ಆದರು.

ನಂದಿನಿ ನಾಗರಾಜ್ ಹಾಗೂ ಜಸ್ಪ್ರೀತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ 10 ರೂಪದರ್ಶಿಯರ ತಂಡ ಜೈಪುರಕ್ಕೆ ತೆರಳಿತ್ತು. ಒಟ್ಟು 40 ಸ್ಪರ್ಧಿಗಳು ಭಾಗವಹಿಸಿದ್ದರು. ವಿಂಟೇಜ್, ಗೌನ್, ಎಥ್‍ನಿಕ್, ಟ್ಯಾಲೆಂಟ್ ಸುತ್ತುಗಳಲ್ಲಿ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು.

“ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿದ್ದ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ತೆಳ್ಳಗೆ, ಬೆಳ್ಳಗೆ ಇರುವವರು, ಎತ್ತರ, ದಪ್ಪ, ವಯಸ್ಸನ್ನು ನೋಡಿ ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಅವರಿಗೆ ಇರುವ ಅರ್ಹತೆ ಹಾಗೂ ಆತ್ಮವಿಶ್ವಾಸವೇ ನಮ್ಮ ಸ್ಪರ್ಧೆಯ ಮಾನದಂಡವಾಗಿತ್ತು’ ಎಂದು ಆಯೋಜಕಿ ನಂದಿನಿ ನಾಗರಾಜ್ ಹೇಳಿದರು.

ಬೆಂಗಳೂರಿನ ತಂಡ ಜೈಪುರದಲ್ಲಿ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ತಂಡ ಮುಂದಿನ ವರ್ಷ ಸಿಂಗಪುರದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲಿದೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago