ರಾಜಸ್ಥಾನ: ಮದುವೆ ಮಾಡುವ ಸಂದರ್ಭದಲ್ಲಿ ವರನ ಕಡೆಯವರಿಗೆ ವಧುವಿನ ಕುಟುಂಬಸ್ಥರು ಲಕ್ಷಾಂತರ ರೂಪಾಯಿ ವರದಕ್ಷಿಣೆ ರೂಪದಲ್ಲಿ ನೀಡುವುದು ಸರ್ವೇ ಸಾಮಾನ್ಯ. ಆದರೆ ಇಲ್ಲೋರ್ವ ವಧು ತನ್ನ ಗಂಡನಿಗೆ ನೀಡುವ ವರದಕ್ಷಿಣೆ ಹಣದಲ್ಲಿ ವಿದ್ಯಾರ್ಥಿನಿಗಳಿಗೋಸ್ಕರ ಹಾಸ್ಟೆಲ್ ಕಟ್ಟಿಸುವಂತೆ ಕೇಳಿಕೊಂಡಿದ್ದಾಳೆಂದು ವರದಿಯಾಗಿದೆ.
ಬಾರ್ಮರ್ ನಗರದ ಕಿಶೋರ್ ಸಿಂಗ್ ಕಾನೋಡ್ ಅವರ ಪುತ್ರಿ ಅಂಜಲಿ ಕನ್ವರ್ ನವೆಂಬರ್ 21ರಂದು ಪ್ರವೀಣ್ ಸಿಂಗ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರದಿವೊಂದರ ಪ್ರಕಾರ, ಅಂಜಲಿ ಮದುವೆಯಲ್ಲಿ ವರದಕ್ಷಿಣೆಗಾಗಿ ಮೀಸಲಿಟ್ಟಿರುವ ಹಣದ ಬಗ್ಗೆ ತಂದೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಆ ಎಲ್ಲ ಹಣ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಮಾಡಲು ಬಳಸುವಂತೆ ತಿಳಿಸಿದ್ದಾರೆ. ಮಗಳ ಆಸೆಯಂತೆ ಅಂಜಲಿ ತಂದೆ ಕಿಶೋರ್ ಸಿಂಗ್ ಒಪ್ಪಿಗೆ ಸೂಚಿಸಿ, 75 ಲಕ್ಷ ರೂ. ಕಟ್ಟಡ ನಿರ್ಮಾಣಕ್ಕಾಗಿ ನೀಡಿದ್ದಾರೆ.
ಅಂಜಲಿ ತೆಗೆದುಕೊಂಡಿರುವ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮದುವೆ ಸಮಾರಂಭದ ವೇಳೆ ಅಂಜಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಅತಿಥಿಗಳಿಗೂ ತಿಳಿಸಲಾಗಿದೆ. ಈ ನಿರ್ಧಾರಕ್ಕಾಗಿ ಶಹಬ್ಬಾಸ್ಗಿರಿ ನೀಡಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ರಾಜಸ್ಥಾನದ ಎನ್ಎಚ್ 68ನಲ್ಲಿ ಹಾಸ್ಟೆಲ್ ನಿರ್ಮಾಣಕ್ಕಾಗಿ ಕಾನೋಡ್ ಈಗಾಗಲೇ 1 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆಂದು ತಿಳಿದು ಬಂದಿದೆ. ಉಳಿದ ಕಾಮಗಾರಿ ಪೂರ್ಣಗೊಳಿಸಲು 50ರಿಂದ 75 ಲಕ್ಷ ರೂ. ಹೆಚ್ಚುವರಿ ಅಗತ್ಯವಿದ್ದು, ಇದೀಗ ಮಗಳು ಆ ಹಣ ನೀಡಿದ್ದಾರೆ.
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…