ಕೋಟ, ರಾಜಸ್ಥಾನ: ಭೂವಿವಾದದ ಹಿನ್ನೆಲೆಯಲ್ಲಿ ಕಾರ್ಮಿಕನೊಬ್ಬನನ್ನು ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿ, ಆತನ ಕಾಲುಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿರುವ ಕೃತ್ಯ ಬುಂದಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಅರಣ್ಯ ಭೂಮಿಯ ನಿಯಮಬಾಹಿರ ಅತಿಕ್ರಮಣಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಒಂಬತ್ತು ಜನರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯೋಗ ಖಾತರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದ ಕಾರ್ಮಿಕ ಸುಖ್ಲಾಲ್ ಗುರ್ಜಾರ್ ಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ದಾಳಿ ನಡೆಸಿದ ಗುಂಪು ಮನಬಂದಂತೆ ಥಳಿಸಿ ಹತ್ಯೆಗೈದಿದೆ ಎಂದಿದ್ದಾರೆ.