ರಾಜಸ್ಥಾನ

ಮಗನ ಅಕಾಲಿಕ ಮರಣದ ನಂತರ, ಸೊಸೆಗೆ ಮದುವೆ ಮಾಡಿಸಿದ ಅತ್ತೆ

ಅತ್ತೆ- ಸೊಸೆ ಎಂದರೆ ಬಹುತೇಕರು ಹಾವು- ಮುಂಗುಸಿಗೆ ಹೋಲಿಕೆ ಮಾಡುತ್ತಾರೆ. ಆದರೆ, ಇಲ್ಲೊಬ್ಬರು ಅತ್ತೆಯ ತ್ಯಾಗ ನೋಡಿದರೆ ಎಲ್ಲರೂ ಅತ್ತೆಯಂದಿರನ್ನು ಕೈ ಮುಗಿದು ನಮಿಸಲೇಬೇಕು.

ಮಗ ಅಕಾಲಿಕವಾಗಿ ಸಾವನ್ನಪ್ಪುತ್ತಿದ್ದಂತೆ, ಈ ಮಹಾತಾಯಿ ಸೊಸೆಯನ್ನೇ ಮಗಳೆಂದು ಭಾವಿಸಿ ನೋಡಿಕೊಂಡಿದ್ದಾರೆ. ಅಲ್ಲದೇ, ಸೊಸೆಗೆ ಉನ್ನತ ವ್ಯಾಸಂಗ ಕೊಡಿಸಿ, ಶಿಕ್ಷಕಿಯಾಗುವಂತೆ ಮಾಡಿದ್ದಾರೆ. ಕೊನೆಗೆ ತಾವೇ ಮುಂದೆ ನಿಂತು ಮದುವೆ ಕೂಡ ಮಾಡಿದ್ದಾರೆ.

ಅತ್ತೆಯ ಈ ಮಾದರಿ ಕಾರ್ಯ ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿ ಬೆಳಕಿಗೆ ಬಂದಿದ್ದು, ಕಮಲಾ ದೇವಿ ಎಂಬುವವರೇ ಈ ರೀತಿಯ ಮಾದರಿ ಅತ್ತೆ ಎನ್ನಲಾಗಿದೆ. ಇವರ ಕಿರಿಯ ಮಗ ಶುಭಂ ಎಂಬುವವರು 2016ರಲ್ಲಿ ವಿವಾಹವಾಗಿದ್ದರು. ಕಿರ್ಗಿಸ್ತಾನ್ ದಲ್ಲಿ ಎಂಬಿಬಿಎಸ್ ಓದಲು ತೆರಳಿದ್ದಾಗ ಬ್ರೈನ್ ಸ್ಟ್ರೋಕ್ ನಿಂದಾಗಿ ಸಾವನ್ನಪ್ಪಿದ್ದರು. ಅಷ್ಟರಲ್ಲಿ ವಿವಾಹವಾಗಿ ಕೆಲವೇ ತಿಂಗಳು ಕಳೆದಿದ್ದವು.

ಆಗ ಮಗನನ್ನು ಕಳೆದುಕೊಂಡ ನೋವಿನಲ್ಲಿದ್ದರೂ ತಾಯಿ ಮಾತ್ರ ಸೊಸೆಯ ಕೈ ಬಿಟ್ಟಿಲ್ಲ. ಮಗಳಂತೆ ನೋಡಿಕೊಂಡು ಸೊಸೆ ಸುನೀತಾರಿಗೆ ಉನ್ನತ ವ್ಯಾಸಂಗ ಕೊಡಿಸಿದ್ದಾರೆ. ಅತ್ತೆಯ ಮಾರ್ಗದರ್ಶನದಲ್ಲಿಯೇ ಮುಂದುವರೆದ ಸೊಸೆ ಕೂಡ ಉತ್ತಮವಾಗಿ ವ್ಯಾಸಂಗ ಮಾಡಿದ್ದಾರೆ. ಸುನೀತಾ ಅವರು ಬಡತನದ ಮನೆಯಲ್ಲಿ ಬೆಳೆದಿದ್ದವರು. ಮಗನಿಗೆ ಮದುವೆ ಮಾಡಿದರೆ, ಈ ಯುವತಿಗೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿಯೇ ತಾಯಿ ಕಮಲಾದೇವಿ ಅವರು, ಬಡ ಮನೆತನದ ಸುನೀತಾರೊಂದಿಗೆ ಮಗನ ವಿವಾಹ ನೆರವೇರಿಸಿದ್ದರು.

ಈಗ ಸುನೀತ್ ಚುರು ಜಿಲ್ಲೆಯ ಸರ್ದಾರ್ ನಗರದ ನೈನಾಸರ್ ಸುಮೇರಿಯಾದಲ್ಲಿ ಶಿಕ್ಷಕಿಯಾಗಿದ್ದಾರೆ. ಕಮಲಾದೇವಿ ಅವರು ಕೂಡ ಅನಕ್ಷರಸ್ಥರಲ್ಲ, ಅವರು ಕೂಡ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಸೊಸೆಗೆ ಕೆಲಸ ಸಿಗುತ್ತಿದ್ದಂತೆ ಈಗ ತಾವೇ ಮುಂದೆ ನಿಂತು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಮದುವೆ ಮಾಡಿ ಕೊಟ್ಟಿದ್ದಾರೆ. ಅತ್ತೆಯ ಈ ಕಾರ್ಯಕ್ಕೆ ಸದ್ಯ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

25 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

43 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago