News Karnataka Kannada
Sunday, April 28 2024
ರಾಜಸ್ಥಾನ

ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ

Mass Rape 15 7 21
Photo Credit :

ಅಲ್ವಾರ್,ಡಿ.8 : ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮೊದಲಿನಿಂದಲೂ ಪ್ರಚಲಿತದಲ್ಲಿದೆ. ರಾಜಸ್ತಾನದ ಈ ಪೈಶಾಚಿಕ ಕೃತ್ಯ ಇದಕ್ಕೆ ಅನ್ವರ್ಥವಾಗಿದ್ದು, ಗುರು-ಶಿಷ್ಯ ಪರಂಪರೆಗೆ ಕಳಂಕ ತರುವಂತಿದೆ. ರಾಜಸ್ತಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರು ಮತ್ತು 9 ಮಂದಿ ಶಿಕ್ಷಕರು ನಾಲ್ಕು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಹಾಗೂ ವಿಕೃತ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೇಸು ದಾಖಲಾಗುತ್ತಿದ್ದಂತೆ ಶಾಲೆಯ ಮತ್ತಷ್ಟು ವಿದ್ಯಾರ್ಥಿನಿಯರು ತಮ್ಮ ಮೇಲಾದ ದೌರ್ಜನ್ಯ ಹೇಳಿಕೊಳ್ಳಲು ಮುಂದೆ ಬಂದಿದ್ದಾರೆ. ದುರಂತವೆಂದರೆ ಪುರುಷ ಶಿಕ್ಷಕರ ಪೈಶಾಚಿಕ ಕೃತ್ಯಕ್ಕೆ ಮಹಿಳಾ ಶಿಕ್ಷಕಿಯರು ಸಾಥ್ ನೀಡಿರುವುದು ಆಘಾತ ತಂದಿದೆ. ಎಲ್ಲಾ ಆರೋಪಿಗಳು ಸದ್ಯಕ್ಕೆ ತಲೆ ಮರೆಸಿಕೊಂಡಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹೋಗಲು ನಿರಾಕರಿಸಿದ್ದರು. ಆಕೆಯ ತಂದೆ ಕಾರಣ ಕೇಳಿದಾಗ ಮುಜುಗರದಿಂದಲೇ ವಿಷಯ ಬಾಯಿಬಿಟ್ಟಿದ್ದು, ಶಾಲಾ ಪ್ರಾಂಶುಪಾಲರು ಹಾಗೂ ಮೂವರು ಶಿಕ್ಷಕರು ಒಂದು ವರ್ಷದಿಂದಲೂ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಅದಕ್ಕೆ ಇಬ್ಬರು ಮಹಿಳಾ ಶಿಕ್ಷಕಿಯರು ಸಹಕಾರ ನೀಡಿ ವಿಡಿಯೋ ಚಿತ್ರೀಕರಿಸಿಕೊಂಡಿರುವುದಾಗಿ ತಿಳಿಸಿದ್ದಾಳೆ.

ಬಾಲಕಿಯ ಮಾಹಿತಿ ಆಧರಿಸಿ ಮಂಧಾನ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿ ಮುಖೇಶ್‍ಯಾದವ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಮೂರು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ವಿಚಾರಣೆ ಮುಂದುವರೆಸಲಾಗಿದೆ ಎಂದಿದ್ದಾರೆ.

ಪೊಲೀಸರು ವಿಚಾರಣೆ ಆರಂಭಿಸುತ್ತಿದ್ದಂತೆ 6,4 ಹಾಗೂ 3ನೇ ತರಗತಿಯ ವಿದ್ಯಾರ್ಥಿಗಳು ಮುಂದೆ ಬಂದಿದ್ದು, ಪ್ರಾಂಶುಪಾಲರು ಹಾಗೂ ಶಿಕ್ಷಕರಿಂದ ತಮಗಾದ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊದಲ ಹಂತದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ದೂರು ದಾಖಲಾಗಿದೆ. ಒಬ್ಬ ವಿದ್ಯಾರ್ಥಿನಿ ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಶಿಕ್ಷಕಿಯರಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಅವರಿಂದಲೂ ವಿದ್ಯಾರ್ಥಿನಿಯರ ಬಾಯಿ ಮುಚ್ಚಿಸಲಾಗಿದ್ದು, ಶಾಲೆ ಶುಲ್ಕ ಮತ್ತು ಪುಸ್ತಕಗಳ ಖರ್ಚನ್ನು ಕೊಡಿಸುವುದಾಗಿ ಸಮಾಧಾನ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಹಿಳಾ ಶಿಕ್ಷಕಿಯರೇ ವಿದ್ಯಾರ್ಥಿನಿಯನ್ನು ಮೂರು ಜನ ಶಿಕ್ಷಕರು ಸೇರಿದ್ದ ಮನೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪ್ರಾಂಶುಪಾಲರು ಇದ್ದರು. ಎಲ್ಲರೂ ಮದ್ಯಪಾನ ಮಾಡಿದ್ದರು. ನನ್ನ ಬಟ್ಟೆ ಕಳಚಿ ದೌರ್ಜನ್ಯ ವೆಸಗಿದ್ದರು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಘಟನೆ ಬಗ್ಗೆ ಯಾರ ಬಳಿಯೂ ಹೇಳಿಕೊಳ್ಳಬಾರದು ಎಂದು ವಿದ್ಯಾರ್ಥಿನಿಯರಿಗೆ ಪ್ರಾಣ ಬೆದರಿಕೆ ಒಡ್ಡಲಾಗಿತ್ತು. ವಿದ್ಯಾರ್ಥಿನಿಯ ತಂದೆ ಠಾಣೆಗೆ ದೂರು ನೀಡಲು ಹೋದಾಗ ಅವರ ಮೇಲೂ ಸಾಕಷ್ಟು ಒತ್ತಡ ಹೇರಿದ್ದು, ಖುದ್ದು ಪ್ರಾಂಶುಪಾಲರೇ ಹತ್ಯೆಯ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು