2022 ರ ಜನವರಿ 31 ರವರೆಗೆ ರಾಜಸ್ಥಾನದಲ್ಲಿ ಪಟಾಕಿ ನಿಷೇಧ

ರಾಜಸ್ಥಾನ  : ಅಕ್ಟೋಬರ್‌ 1 ರಿಂದ ಮುಂಬರುವ ವರ್ಷ ಅಂದರೆ 2022 ರ ಜನವರಿ 31 ರವರೆಗೆ ರಾಜಸ್ಥಾನ ದಲ್ಲಿ ಪಟಾಕಿಯನ್ನು ನಿಷೇಧ ಮಾಡಿ ರಾಜಸ್ಥಾನ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ದೆಹಲಿಯಲ್ಲಿ ಮುಂದಿನ 3 ತಿಂಗಳು ಪಟಾಕಿ ಸಿಡಿಸುವಂತಿಲ್ಲ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಬುಧವಾರ ಆದೇಶಿಸಿದೆ. ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಹಿನ್ನೆಲೆ ಈ ನಿಷೇಧ ಹೇರಲಾಗಿದೆ.
ದೀಪಾವಳಿ, ದಸರಾ ಹಬ್ಬಗಳು ಬರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಇನ್ನು ರಾಜಸ್ಥಾನ ಸರ್ಕಾರ ತನ್ನ ಈ ಆದೇಶದಲ್ಲಿ, ಕೊರೋನಾ ಸೋಂಕಿನ ಮೂರನೇ ಅಲೆಯು ದೇಶದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಇದೆ. ಸೋಂಕು ಇರುವ ಜನರಿಗೆ ಉಸಿರಾಟದ ತೊಂದರೆ ಇರುತ್ತದೆ. ಈ ಹಬ್ಬಗಳ ಹಿನ್ನೆಲೆ ಪಟಾಕಿಯನ್ನು ಸಿಡಿಸಿದರೆ, ಈ ವೈರಸ್‌ ಸೋಂಕಿತರಿಗೆ ಉಸಿರಾಟದ ತೊಂದರೆ ಇನ್ನಷ್ಟು ಅಧಿಕ ಉಂಟಾಗುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆ ಈ ವರ್ಷದ ಅಕ್ಟೋಬರ್‌ 1 ರಿಂದ ಮುಂಬರುವ ವರ್ಷ ಅಂದರೆ 2022 ರ ಜನವರಿ 31 ರವರೆಗೆ ರಾಜಸ್ಥಾನದಲ್ಲಿ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧ ಮಾಡಲಾಗಿದೆ,ಎಂದು ತಿಳಿಸಿದೆ. ಇನ್ನು ಆದೇಶದ ಹೊರತಾಗಿಯೂ ಪಟಾಕಿಯನ್ನು ಮಾರಾಟ ಮಾಡಿದರೆ ಅಥವಾ ಪಟಾಕಿಯನ್ನು ಸಿಡಿಸಿದರೆ ಅವರ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಕೂಡಾ ರಾಜಸ್ಥಾನ ಸರ್ಕಾರ ಹೇಳಿದೆ

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago