ನೋಟುಗಳಲ್ಲಿ ಗಾಂಧಿ ಫೋಟೋ, ಮೋದಿ ಬಳಿ ಕಾಂಗ್ರೆಸ್ ಶಾಸಕ ಮನವಿ

ಕೋಟ : “500 ರೂ., 2 ಸಾವಿರ ರೂ. ನೋಟುಗಳಿಂದ ಮಹಾತ್ಮಾ ಗಾಂಧಿಯವರ ಫೋಟೋ ತೆಗೆಯಿರಿ. ಏಕೆಂದರೆ ಅದನ್ನು ಭ್ರಷ್ಟಾಚಾರಕ್ಕಾಗಿ ಬಳಕೆ ಮಾಡಲಾಗುತ್ತದೆ’ ಹೀಗೆಂದು ರಾಜಸ್ಥಾನದ ಕಾಂಗ್ರೆಸ್‌ ಶಾಸಕ ಭರತ್‌ ಸಿಂಗ್‌ ಕುಂದನ್‌ಪುರ್‌ ಪ್ರಧಾನಿ ನರೇಂದ್ರ ಮೋದಿಯವರಿಗೇ ಪತ್ರ ಬರೆದಿದ್ದಾರೆ.

ಇದು ಮಹಾತ್ಮಾ ಗಾಂಧಿಯವರಿಗೆ ಮಾಡುವ ಅವಮಾನ ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಮಹಾತ್ಮಾ ಗಾಂಧಿಯವರು ಸತ್ಯದ ಪ್ರತೀಕ ಎಂದು ಬಣ್ಣಿಸಿರುವ ಭರತ್‌ ಸಿಂಗ್‌, 500 ರೂ., 2 ಸಾವಿರ ರೂ. ನೋಟುಗಳನ್ನು ಲಂಚ ನೀಡಲು, ಬಾರ್‌ಗಳಲ್ಲಿ ಮದ್ಯದ ಪಾರ್ಟಿಗಳಿಗೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ 2019ರ ಜನವರಿಯಿಂದ 2020 ಡಿ.30ರ ವರೆಗೆ 616 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಅಂದರೆ ಪ್ರತಿ ದಿನ ಸರಾಸರಿ 2 ಕೇಸುಗಳು ದಾಖಲಾದಂತೆ ಆಗಿವೆ ಎಂದು ಶಾಸಕ ಸಿಂಗ್‌ ಪ್ರಧಾನಿಯವರಿಗೆ ವಿವರಿಸಿದ್ದಾರೆ.

Raksha Deshpande

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

33 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

50 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago