ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ಮಹಿಳೆಯರು ಹಾಗೂ ಶೋಷಿತ ವರ್ಗಗಳಿಗೆ ಹಲವು ಯೋಜನೆ ಜಾರಿಗೊಳಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ₹400ಕ್ಕೆ ಗ್ಯಾಸ್ ಸಿಲಿಂಡರ್, ಪಂಚಾಯತ್ ಮಟ್ಟದಲ್ಲಿ ಉದ್ಯೋಗ ಸೃಷ್ಠಿ ಮಾಡುವ ಭರವಸೆ ನೀಡಲಾಗಿದೆ.
ಮನೆಯೊಡತಿಗೆ ವಾರ್ಷಿಕ ₹10,000 ಸಹಾಯಧನ., 1.4 ಕುಟುಂಬಗಳಿಗೆ ₹500ಗೆ ಎಲ್ಪಿಜಿ ಸಿಲಿಂಡರ್., ಕೆ.ಜಿಗೆ ₹2ರಂತೆ ರೈತರಿಂದ ಸಗಣಿ ಖರೀದಿ., ಚಿರಂಜೀವಿ ಆರೋಗ್ಯ ವಿಮೆ ಮೊತ್ತ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ., ಸರ್ಕಾರಿ ಉದ್ಯೋಗಿಗಳಿಗೆ ಹಳೆ ಪಿಂಚಣಿ ಪಡೆಯಲು ಹೊಸ ಕಾನೂನು., ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್., ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮೆ ಘೋಷಣೆ ಮಾಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಹೊಸ ಕಾನೂನು ಜಾರಿಗೆ ತರಲಾಗುವುದು. ಜತೆಗೆ ಸರ್ಕಾರ ರಚಿಸಿದ ಕೂಡಲೇ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದರು.