News Karnataka Kannada
Thursday, May 09 2024
ರಾಜಸ್ಥಾನ

ವಿಧಾನಸಭೆ ಚುನಾವಣೆ: 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

Rajastan
Photo Credit : News Kannada

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

ಮಹಿಳೆಯರು ಹಾಗೂ ಶೋಷಿತ ವರ್ಗಗಳಿಗೆ ಹಲವು ಯೋಜನೆ ಜಾರಿಗೊಳಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ₹400ಕ್ಕೆ ಗ್ಯಾಸ್‌ ಸಿಲಿಂಡರ್, ಪಂಚಾಯತ್‌ ಮಟ್ಟದಲ್ಲಿ ಉದ್ಯೋಗ ಸೃಷ್ಠಿ ಮಾಡುವ ಭರವಸೆ ನೀಡಲಾಗಿದೆ.

ಮನೆಯೊಡತಿಗೆ ವಾರ್ಷಿಕ ₹10,000 ಸಹಾಯಧನ., 1.4 ಕುಟುಂಬಗಳಿಗೆ ₹500ಗೆ ಎಲ್‌ಪಿಜಿ ಸಿಲಿಂಡರ್‌., ಕೆ.ಜಿಗೆ ₹2ರಂತೆ ರೈತರಿಂದ ಸಗಣಿ ಖರೀದಿ., ಚಿರಂಜೀವಿ ಆರೋಗ್ಯ ವಿಮೆ ಮೊತ್ತ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ., ಸರ್ಕಾರಿ ಉದ್ಯೋಗಿಗಳಿಗೆ ಹಳೆ ಪಿಂಚಣಿ ಪಡೆಯಲು ಹೊಸ ಕಾನೂನು., ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್ಲೆಟ್., ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮೆ ಘೋಷಣೆ ಮಾಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಹೊಸ ಕಾನೂನು ಜಾರಿಗೆ ತರಲಾಗುವುದು. ಜತೆಗೆ ಸರ್ಕಾರ ರಚಿಸಿದ ಕೂಡಲೇ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು