ಜೈಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದ ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಇದಕ್ಕೂ ಮುನ್ನ ಹೈಕಮಾಂಡ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರನ್ನು ವೀಕ್ಷಕರಾಗಿ ಜೈಪುರಕ್ಕೆ ಕಳುಹಿಸಿತ್ತು. ಇದಕ್ಕೂ ಮುನ್ನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಭೇಟಿ ಮಾಡಿದ್ದರು.
ಚುನಾವಣಾ ಗೆಲುವಿನ ನಂತರ ಪಕ್ಷದ ಹಲವು ಶಾಸಕರಿಗೆ ವಸುಂಧರಾ ಅವರು ಔತಣಕೂಟ ನೀಡಿದ್ದು, ಒತ್ತಡದ ರಾಜಕಾರಣವೆಂಬಂತಾಗಿತ್ತು. ಆದರೆ, ನಡ್ಡಾ ಅವರನ್ನು ಭೇಟಿಯಾದ ನಂತರ ವಸುಂಧರಾ ಅವರ ಸ್ವರ ಬದಲಾದಂತಿದೆ. ತಾವು ಪಕ್ಷದ ಶಿಸ್ತಿನ ಕಾರ್ಯಕರ್ತೆ ಎಂದು ಬಣ್ಣಿಸಿದರು.