News Karnataka Kannada
Friday, May 10 2024
ರಾಜಸ್ಥಾನ

ರಾಜಸ್ಥಾನದಲ್ಲಿ 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Congress announces 7 guarantees in Rajasthan
Photo Credit : Facebook

ಜೈಪುರ: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ಭರ್ಜರಿ ಜಯಗಳಿಸಿತ್ತು. ಅದೇ ಸೂತ್ರವನ್ನು ರಾಜಸ್ಥಾನದಲ್ಲಿಯೂ ಪಾಲನೆ ಮಾಡುತ್ತಿದ್ದು, ರಾಜಸ್ಥಾನ ಚುನಾವಣೆಗೆ ಇನ್ನು ಕೇವಲ ಒಂದು ತಿಂಗಳು ಬಾಕಿ ಉಳಿದಿರುವ ನಡುವೆಯೇ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಕಾಂಗ್ರೆಸ್‌ ಪಕ್ಷದ ವತಿಯಿಂದ 7 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

ಈ ಪೈಕಿ 2 ಗ್ಯಾರಂಟಿಗಳು 3 ದಿನದ ಹಿಂದೆ ಘೋಷಣೆ ಆಗಿದ್ದರೆ, ಇನ್ನು 5 ಗ್ಯಾರಂಟಿಗಳು ಹೊಸ ಘೋಷಣೆಗಳಾಗಿವೆ. ಈ ಪೈಕಿ ಮನೆಯ ಯಜಮಾನತಿಗೆ ಗೃಹಲಕ್ಷ್ಮಿ ಯೋಜನೆ ಅಡಿ ವರ್ಷಕ್ಕೆ 10 ಸಾವಿರ ರೂ. ಹಾಗೂ 500 ರೂ .ನಲ್ಲಿ ಸಬ್ಸಿಡಿ ಸಿಲಿಂಡರ್‌ ನೀಡಿಕೆಯನ್ನು 3 ದಿನದ ಹಿಂದೆಯೇ ಪ್ರಕಟಿಸಿದ್ದರು. ಈ ಎರಡೂ ಸೇರಿ ಒಟ್ಟು 7 ಗ್ಯಾರಂಟಿಗಳನ್ನು ಶುಕ್ರವಾರ ಅವರು ಪ್ರಕಟಿಸಿದರು.

ಹೊಸ ಘೋಷಣೆಗಳ ಪೈಕಿ, ಸರ್ಕಾರವು ರೈತರಿಂದ ಹಸು ಸಗಣಿಯನ್ನು ಕೆಜಿಗೆ 2 ರೂ. ನಂತೆ ಖರೀದಿಸಿ ರಸಗೊಬ್ಬರವಾಗಿ ಪರಿವರ್ತಿಸಲಿದೆ. ಪ್ರಸ್ತುತ ಭಾರತದಲ್ಲಿ ಕೇವಲ ಛತ್ತೀಸ್‌ಗಢದಲ್ಲಿ ಮಾತ್ರ ಈ ಯೋಜನೆ ಜಾರಿಯಲ್ಲಿದ್ದು ಅದನ್ನು ಗೋಧನ ನ್ಯಾಯ ಯೋಜನೆ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು