ಜಲ್ವಾರ್ : ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐದು ಜನರ ಮೇಲೆ ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಡಂಪರ್ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು ಗುಂಪಿಗಳ ನಡುವೆ ಜಗಳ ನಡೆದಿದ್ದು, ವಿವಾದಕ್ಕೆ ಕಾರಣ ತಿಳಿದುಬಂದಿಲ್ಲ.
ಇಬ್ಬರು ಸಹೋದರರು ಸೇರಿದಂತೆ ಐವರು ಪೋಲಿಸ್ ಠಾಣೆಗೆ ದೂರು ದಾಖಲಿಸುವುದಾಗಿ ಎರಡು ಮೋಟಾರು ಸೈಕಲ್ ನಲ್ಲಿ ಹೊರಟ್ಟಿದ್ದರು. ಇವರನ್ನು ತಡೆದ ಆರೋಪಿಗಳು ಡಂಪರ್ ಟ್ರಕ್ ನ್ನು ಮೋಟಾರ್ ಸೈಕಲ್ ಮೇಲೆ ಹರಿಸಿ, ಸ್ಥಳದಲ್ಲಿಯೇ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಘಟನೆಯ ನಂತರ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪಗಾರಿಯಾ ಠಾಣಾಧಿಕಾರಿ ವಿಜಯೇಂದ್ರ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಲ್ ಆಫೀಸರ್ ಪ್ರೇಮ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್ಎಚ್ಒ ವಿಜೇಂದ್ರ ಸಿಂಗ್ ಹೇಳಿದ್ದಾರೆ.