ರಾಜಸ್ಥಾನ: ನಾಗೌರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಜುಂಜುನುವಿನಲ್ಲಿ ಪ್ರಧಾನಿ ರ್ಯಾಲಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಪೊಲೀಸರ ಶವಗಳು ಕಾರಿನೊಳಗೆ ಸಿಲುಕಿಕೊಂಡಿವೆ.
ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ನಾಗೌರ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ.
“ಚುರುವಿನ ಸುಜನ್ಗಢ್ ಸದರ್ ಪ್ರದೇಶದಲ್ಲಿ ನಡೆದ ಅಪಘಾತ ಸುದ್ದಿ ಕೇಳಿ ತುಂಬಾ ನೋವಾಗಿದೆ, ಅಪಘಾತದಲ್ಲಿ ಮೃತಪಟ್ಟ ಎಲ್ಲಾ ಪೊಲೀಸರ ಕುಟುಂಬಗಳಿಗೆ ದುಃಖವನ್ನು ಮರೆಯುವ ಶಕ್ತಿ ನೀಡಲಿ, ಗಾಯಗೊಂಡಿರುವ ಪೊಲೀಸರು ಬೇಗ ಚೇತರಿಸಿಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.