ಜೈಪುರ: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು. ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು, ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ವಿದ್ಯುತ್ ಬಂದ ಕಾರಣ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅರ್ಜುನ ಅವರ ಮಾನ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ, ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.