News Karnataka Kannada
Tuesday, April 30 2024
ರಾಜಸ್ಥಾನ

ಜೈಪುರ: ರಾಜಸ್ಥಾನದ ಖುತು ಶ್ಯಾಮ್ ದೇವಾಲಯದಲ್ಲಿ ಕಾಲ್ತುಳಿತ, ಮೂವರು ಯಾತ್ರಾರ್ಥಿಗಳ ಸಾವು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಜೈಪುರ: ರಾಜಸ್ಥಾನದ ಸಿಕಾರ್ ನ ಖುತು ಶ್ಯಾಮ್ ದೇವಾಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಯಾತ್ರಾರ್ಥಿಗಳು ಮೃತಪಟ್ಟಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಏಕಾದಶಿಯಂದು ಬೆಳಿಗ್ಗೆ 5.00 ಗಂಟೆಗೆ ಭಕ್ತರ ದೊಡ್ಡ ಗುಂಪು ದರ್ಶನಕ್ಕಾಗಿ ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ಭಾನುವಾರ ತಡರಾತ್ರಿಯಿಂದ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಮತ್ತು ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆಯೇ ಕಾಲ್ತುಳಿತ ಸಂಭವಿಸಿದೆ.

ಮೃತ ಮೂವರೂ ಮಹಿಳಾ ಭಕ್ತರು. ಮೃತರ ದೇಹಗಳನ್ನು ಖತುಶ್ಯಾಂಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಗಾಯಗೊಂಡವರನ್ನು ಶಿವಚರಣ್ (50), ಮನೋಹರ್ (40), ಕರ್ನಾಲ್ ನ ಇಂದ್ರಾ ದೇವಿ (55), ಅಲ್ವಾರ್ ನ ಅನೋಜಿ (40) ಎಂದು ಗುರುತಿಸಲಾಗಿದೆ. ಮನೋಹರ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜೈಪುರಕ್ಕೆ ಕಳುಹಿಸಲಾಗಿದೆ.

ಏತನ್ಮಧ್ಯೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೂವರು ಭಕ್ತರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು “ಸಿಕಾರ್ನ ಖತುಶ್ಯಾಮ್ ಜೀ ಅವರ ದೇವಾಲಯದಲ್ಲಿ ಕಾಲ್ತುಳಿತದಿಂದಾಗಿ ಮೂವರು ಮಹಿಳಾ ಭಕ್ತರು ಸಾವನ್ನಪ್ಪಿರುವುದು ತುಂಬಾ ದುಃಖಕರ ಮತ್ತು ದುರದೃಷ್ಟಕರ. ದುಃಖತಪ್ತ ಕುಟುಂಬದ ಬಗ್ಗೆ ನನ್ನ ಆಳವಾದ ಸಹಾನುಭೂತಿ ಇದೆ. ಈ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ. ಕಾಲ್ತುಳಿತದಲ್ಲಿ ಗಾಯಗೊಂಡ ಭಕ್ತರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು