ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಕನ್ಹಿಯಾ ಲಾಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ದಳವು ಗುರುವಾರ ಈ ಬಂಧನಗಳನ್ನು ನಡೆಸಿದೆ. ಆರೋಪಿಗಳಾದ ಮೊಹ್ಸಿನ್ ಮತ್ತು ಆಸಿಫ್ ಅವರನ್ನು ಐಪಿಸಿ ಸೆಕ್ಷನ್ 120 ಬಿ, 307,326 ರ ಅಡಿಯಲ್ಲಿ ಬಂಧಿಸಲಾಗಿದೆ.ಇಡೀ ಅಪರಾಧದ ಹಿಂದಿನ ಪಿತೂರಿ ಮತ್ತು ಸಿದ್ಧತೆಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಾದಿ ಮುಹಮ್ಮದ್ ಬಗ್ಗೆ ನೂಪುರ್ ಶರ್ಮಾ ನೀಡಿದ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಜೂನ್ ೨೮ ರಂದು ಅವರ ಅಂಗಡಿಯಲ್ಲಿ ಬರ್ಬರವಾಗಿ ಕೊಲ್ಲಲಾಯಿತು. ಕೊಲೆಗಾರರಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಕೊಲೆಯ ವೀಡಿಯೊವನ್ನು ಅಪ್ಲೋಡ್ ಮಾಡಿ ನಂತರ ಅವರನ್ನು ಬಂಧಿಸಲಾಯಿತು. ಈ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ.