ರಾಜಸ್ಥಾನ: ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ. ಬಿಜೆಪಿ-ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ರಾಜಸ್ಥಾನದತ್ತ ಮುಖ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ರಾಜಸ್ಥಾನ ಅಭಿವೃದ್ದಿಗಾಗಿ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಮಾಡಿದ್ದಾರೆ.
ಅದರಲ್ಲಿ ಪ್ರತಿ ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಠಾಣೆ, ಮಹಿಳಾ ಡೆಸ್ಕ್ ಮತ್ತು ಆ್ಯಂಟಿ ರೋಮಿಯೋ ಸ್ಕ್ವಾಡ್ ರಚನೆ, ಪ್ರತಿ ಹೆಣ್ಣು ಮಗುವಿನ ಜನನದ ಮೇಲೆ 2 ಲಕ್ಷ ರೂ ಬಾಂಡ್, 12ನೇ ತರಗತಿ ತೇರ್ಗಡೆಯಾದ ಹುಡುಗಿಗೆ ಸ್ಕೂಟಿ, ಆರು ಲಕ್ಷ ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಆಧಾರಿತ ತರಬೇತಿ, ಗ್ಯಾಸ್ ಸಿಲಿಂಡರ್ ಮೇಲೆ 450 ರೂ ಸಬ್ಸಿಡಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಾರ್ಷಿಕ 1200 ರೂ, ಪ್ರವಾಸೋದ್ಯಮವನ್ನು ಉತ್ತೇಜಿಸಲು 2000 ಕೋಟಿ ರೂ., ಖಾಲಿ ಇರುವ ಸರ್ಕಾರಿ ಉದ್ಯೋಗಗಳ ಭರ್ತಿ ಭರವಸೆ ಸೇರಿದಂತೆ ಇತರ ಘೋಷಣೆಗಳ ಪ್ರಣಾಳಿಕೆಯನ್ನು ಜೆ.ಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ.