News Karnataka Kannada
Thursday, May 02 2024
ರಾಜಸ್ಥಾನ

ಗಲಭೆ, ಭ್ರಷ್ಟಾಚಾರದಲ್ಲಿ ರಾಜಾಸ್ಥಾನ ನಂಬರ್‌ ಒನ್‌: ಪ್ರಧಾನಿ

Rajasthan number one in riots, corruption
Photo Credit : News Kannada

ಜೈಪುರ್: ರಾಜಸ್ಥಾನದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗಲಭೆ, ಅಪರಾಧ, ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್  ನಂಬರ್ 1 ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ದಿಯೋಗರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವರು ಆರೋಪಗಳ ಮಳೆ ಸುರಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಬಿಜೆಪಿ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದೆ. ಡಿ.3 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ, ನಾವು ರಾಜ್ಯದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಮತ್ತೆ ಆರಂಭಿಸುತ್ತೇವೆ. ಈ ಮೂಲಕ ರಾಜಸ್ಥಾನವನ್ನು ಅಭಿವೃದ್ಧಿಯ ದಿಕ್ಕಿಗೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. 200 ವಿಧಾನಸಭಾ ಸ್ಥಾನಗಳ ಪೈಕಿ 199 ಕ್ಷೇತ್ರಗಳಲ್ಲಿ ನ.25 ರಂದು ಮತದಾನ ನಡೆಯಲಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು