News Karnataka Kannada
Sunday, May 05 2024
ರಾಜಸ್ಥಾನ

ರಾಜಸ್ಥಾನದಲ್ಲಿಯೂ ಗ್ಯಾರಂಟಿ ಕಮಾಲ್‌: ಮಹಿಳೆಯರಿಗೆ ಸಿಕ್ಕಿದ ಬಂಪರ್‌ ಗಿಫ್ಟ್‌ ಏನು ಗೊತ್ತಾ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌-19 ಹಾಗೂ ಹಂದಿ ಜ್ವರ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಕರಿತು ಅಶೋಕ್‌ ಗೆಹ್ಲೋಟ್‌ ಅವರೇ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Photo Credit : News Kannada

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಿದ್ದಾರೆ. ಚಿರಂಜೀವಿ ಯೋಜನೆಯಡಿ ನೋಂದಾಯಿಸಲಾದ 40 ಲಕ್ಷ ಮಹಿಳೆಯರು ಮತ್ತು ಯುವತಿಯರಿಗೆ ಉಚಿತ ಮೊಬೈಲ್ ಫೋನ್‌ಗಳನ್ನು ನೀಡಲಾಗುವುದು. ಇಂಟರ್ನೆಟ್ ಸಂಪರ್ಕವಿರುವ ಸ್ಮಾರ್ಟ್ ಫೋನ್ ಗಳು ಮತ್ತು ಸಿಮ್ ಕಾರ್ಡ್ ಗಳನ್ನು ಸಿಎಂ ಶೀಘ್ರ ವಿತರಿಸಲಿದ್ದಾರೆ.

ಯೋಜನೆಯ ಮೊದಲ ಹಂತದಲ್ಲಿ, 40 ಲಕ್ಷ ಮಹಿಳಾ ಫಲಾನುಭವಿಗಳಿಗೆ ಡೇಟಾ ಸಂಪರ್ಕದೊಂದಿಗೆ ಸ್ಮಾರ್ಟ್‌ ಫೋನ್‌ಗಳು ಮತ್ತು ಸಿಮ್‌ಗಳನ್ನು ವಿತರಿಸಲಾಗುವುದು.

ಫಲಾನುಭವಿಗಳು ತಮಗೆ ಬೇಕಾದ ಸ್ಮಾರ್ಟ್‌ಫೋನ್ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ, ಫಲಾನುಭವಿಗಳಿಗೆ 6800 ರೂ. ಗಳನ್ನು ನೀಡಲಾಗುವುದು. ಮೊದಲ ಹಂತದಲ್ಲಿ, ಸರ್ಕಾರಿ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು, ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರು, ವಿಧವೆ, ಪಿಂಚಣಿ ಪಡೆಯುವ ಮಹಿಳೆಯರು ಹಾಗೂ ನರೇಗಾ ಯೋಜನೆಯಲ್ಲಿ ನೋಂದಾಯಿಸಲಾದ ಕುಟುಂಬದ ಮಹಿಳಾ ಮುಖ್ಯಸ್ಥರು ಮೊಬೈಲ್ ಫೋನ್‌ಗಳನ್ನು ಪಡೆಯುತ್ತಾರೆ.

ಈ ಯೋಜನೆಯು ವಿದ್ಯಾರ್ಥಿನಿಯರು, ವಿಧವೆಯರು ಮತ್ತು ಒಂಟಿ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರದ ವಿಶಿಷ್ಟ ಉಪಕ್ರಮವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಬೈಲ್‌ ನೀಡುವುದರಿಂದ ಮಹಿಳೆಯರಲ್ಲಿ ಜಾಗೃತಿ ಹೆಚ್ಚಾಗುತ್ತದೆ. ಸ್ಮಾರ್ಟ್‌ ಫೋನ್‌ಗಳ ಸಹಾಯದಿಂದ ದೂರದ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ತಮ್ಮ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮತ್ತು ಆನ್‌ಲೈನ್‌ನಲ್ಲಿ ಅಧ್ಯಯನಕ್ಕೆ ಸಹಾಯಕವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು