ಉದಯಪುರ: ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ತಾನದ ಕಾಂಗ್ರೆಸ್ ಸರ್ಕಾರವು “ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಉದಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಕಾಂಗ್ರೆಸ್ ಆಡಳಿತದಲ್ಲಿ ಮಾನವೀಯತೆಯನ್ನು ನಾಚಿಸುವಂತಹ ಘಟನೆಗಳು ನಡೆಯುತ್ತಿವೆ. ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಜೊತೆಗಿನ ಭಯೋತ್ಪಾದಕ ಘಟನೆಯು ಕಾಂಗ್ರೆಸ್ಗೆ ದೊಡ್ಡ ಕಳಂಕವಾಗಿದೆ. ಕಾಂಗ್ರೆಸ್ ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವುದರಿಂದ ಇದು ಸಂಭವಿಸಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಪಿಎಫ್ಐನಂತಹ ಭಯೋತ್ಪಾದಕ ಸಂಘಟನೆಗಳು ರಾಜಸ್ಥಾನದಲ್ಲಿ ನಿರ್ಭೀತಿಯಿಂದ ರ್ಯಾಲಿಗಳನ್ನು ನಡೆಸುತ್ತಿವೆ. ಭಯೋತ್ಪಾದಕರ ಸಹಾನುಭೂತಿ ಹೊಂದಿರುವ ಕಾಂಗ್ರೆಸ್ ಸರ್ಕಾರ ರಾಜಸ್ಥಾನವನ್ನು ನಾಶ ಮಾಡಲಿದೆ ಎಂದು ಟೀಕೆ ಮಾಡಿದ್ದಾರೆ.
उदयपुर की जनसभा में जनसैलाब को देखकर ऐसा लग रहा है कि लोगों ने राजस्थान में कमल खिलाने का मन बना लिया है। आशीर्वाद देने आई जनता-जनार्दन का अभिनंदन। https://t.co/l4BbNojWCM
— Narendra Modi (@narendramodi) November 9, 2023