News Karnataka Kannada
Thursday, May 02 2024
ರಾಜಸ್ಥಾನ

ಜೈಪುರ: ದೆಹಲಿಗೆ ತೆರಳಿದ ಮಾಜಿ ಸಿಎಂ ವಸುಂಧರಾ ರಾಜೆ

Vasundhara Raje leaves for Delhi
Photo Credit : News Kannada

ಜೈಪುರ: ಪಂಚರಾಜ್ಯ ಚುನಾವಣೆಗಳ ಪೈಕಿ ರಾಜಸ್ಥಾನದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಗುರುವಾರದಂದು ರಾಜೆ ಬಿಜೆಪಿ ಹೈಕಮಾಂಡ್ ನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹೊಸದಾಗಿ ಚುನಾಯಿತರಾದ ಸುಮಾರು 60 ಬಿಜೆಪಿ ಶಾಸಕರು ಸಿವಿಲ್ ಲೈನ್ಸ್ ನಲ್ಲಿರುವ ನಿವಾಸದಲ್ಲಿ ವಸುಂಧರಾ ರಾಜೆ ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ.

ಮುಖ್ಯಮಂತ್ರಿಯ ಹೆಸರನ್ನು ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ ಮತ್ತು ಅದಕ್ಕೂ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಶಾಸಕಾಂಗ ಪಕ್ಷದ ಸಭೆ ಕುರಿತು ಪಕ್ಷ ಇನ್ನೂ ಯಾವುದೇ ಘೋಷಣೆ ಮಾಡಿಲ್ಲ. 2003 ರಿಂದ 2008 ಹಾಗೂ 2013-18 ಅವಧಿಯಲ್ಲಿ ವಸುಂಧರಾ ರಾಜೆ 2 ಅವಧಿಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

2018 ರಲ್ಲಿ ಬಿಜೆಪಿಯ ಸೋಲಿನ ನಂತರ ಮತ್ತು ಪಕ್ಷದೊಳಗಿನ ಬದಲಾದ ಬೆಳವಣಿಗೆಗಳ ನಂತರ, ರಾಜೆ ಅವರನ್ನು ಬದಿಗಿರಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದ್ದು, ಮೂರನೇ ಬಾರಿಗೆ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದೆಂಬ ನಿರೀಕ್ಷೆ ಅವರ ಬೆಂಬಲಿಗರಲ್ಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು