ಉತ್ತರ ಪ್ರದೇಶ: ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಂದಿರಕ್ಕೆ 24 ಅರ್ಚಕರನ್ನು ನೇಮಕ ಮಾಡಲಾಗಿದೆ. ಇವರಲ್ಲಿ ಇಬ್ಬರು ಎಸ್ಸಿ ಮತ್ತು ಒಬ್ಬರು ಒಬಿಸಿ ಸಮುದಾಯದವರಾಗಿದ್ದು ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರು ನಿಯೋಜನೆಗೊಳ್ಳಲಿದ್ದಾರೆ. ತರಬೇತಿಯಲ್ಲಿರುವ ಅರ್ಚಕರು ಗುರುಕುಲದ ನಿಯಮಗಳನ್ನು ಪಾಲಿಸುತ್ತಿದ್ದಾರೆ.
ರಾಮಲಲ್ಲಾ ಪೂಜೆಗೆ ಆಯ್ಕೆಯಾಗಿರುವ ಅರ್ಚಕರು ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ. ರಾಮಮಂದಿರದ ಮಹಂತ್ ಮಿಥಿಲೇಶ್ ನಂದಿನಿ ಶರಣ್ ಮತ್ತು ಮಹಂತ್ ಸತ್ಯನಾರಾಯಣ ದಾಸ್ ಅವರು ದೇವಾಲಯದ ವಿಗ್ರಹ ಪೂಜಿಸಲು ಪೌರೋಹಿತ್ಯ ಮತ್ತು ಆಚರಣೆಗಳ ತರಬೇತಿಯನ್ನು ನೀಡುತ್ತಿದ್ದಾರೆ.
ಬ್ರಾಹ್ಮಣೇತರರು ಮಂದಿರದ ಅರ್ಚಕರಾಗಿರುವುದು ಇದೆ ಮೊದಲಲ್ಲ, ದಕ್ಷಿಣ ಭಾರತದ ದೇವಾಲಯಗಳಲ್ಲಿ ಶೇ 70 ಪ್ರತಿಶತದಷ್ಟು ಅರ್ಚಕರು ಬ್ರಾಹ್ಮಣೇತರರು. ಶೈವ ಸಂಪ್ರದಾಯದ ದೇವಾಲಯಗಳಲ್ಲಿ ಬಹುತೇಕ ಬ್ರಾಹ್ಮಣೇತರ ಅರ್ಚಕರು ಪ್ರಾಬಲ್ಯ ಹೊಂದಿದ್ದಾರೆ. ಅರ್ಚಕರ ನೇಮಕದ ಸಂದರ್ಶನದ ವೇಳೆ 14 ಪ್ರಶ್ನೆಗಳನ್ನು ಕೇಳಲಾಗಿತ್ತು. ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ 24 ಯುವಕರನ್ನು ಅರ್ಚಕರ ಹುದ್ದೆಗೆ ನವೆಂಬರ್ನಲ್ಲಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.