News Karnataka Kannada
Monday, May 06 2024
ದೇಶ

ಸಂಗೀತ ಮಾಂತ್ರಿಕ, ಪದ್ಮಶ್ರೀ ಪುರಸ್ಕೃತ ಉಸ್ತಾದ್‌ ರಶೀದ್‌ ಖಾನ್‌ ನಿಧನ

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು 55 ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.ರಾತ್ರಿ ಕೋಲ್ಕತ್ತಾದ ಪೀಸ್ ಹೆವನ್‌ಗೆ ಅವರ ಪಾರ್ಥಿವ ಶರೀರವನ್ನು ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆ ಜನವರಿ 10 ರಂದು ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.
Photo Credit : Twitter

ನವದೆಹಲಿ: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು 55 ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.ರಾತ್ರಿ ಕೋಲ್ಕತ್ತಾದ ಪೀಸ್ ಹೆವನ್‌ಗೆ ಅವರ ಪಾರ್ಥಿವ ಶರೀರವನ್ನು ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆ ಜನವರಿ 10 ರಂದು ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.

2022ರಲ್ಲಿ ಕೇಂದ್ರ ಸರ್ಕಾರ ಇವರಿಗೆ ದೇಶದ ಮೂರನೇ ಅತ್ಯುನ್ನತ ನಾಗರೀಕ ಪುರಸ್ಕಾರವಾದ ಪದ್ಮಭೂಷಣ ಪ್ರಶಸ್ತಿ ನೀಡಿಯೂ ಗೌರವಿಸಿತ್ತು. 1968ರ ಜುಲೈ 1 ರಂದು ಜನಿಸಿದ್ದ ಉಸ್ತಾದ್‌ ರಶೀದ್‌ ಖಾನ್‌, ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದರು.

ಅವರು ರಾಂಪುರ-ಸಹಸ್ವಾನ್ ಘರಾನಾಗೆ ಸೇರಿದವರು ಮತ್ತು ಘರಾನಾ ಸಂಸ್ಥಾಪಕ ಇನಾಯತ್ ಹುಸೇನ್ ಖಾನ್ ಅವರ ಮೊಮ್ಮಗ.  55 ವರ್ಷದ  ಖಾನ್  ವೆಂಟಿಲೇಟರ್‌ನಲ್ಲಿದ್ದರು. ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್  ಆದ ನಂತರ ಖಾನ್ ಅವರ ಆರೋಗ್ಯವು ಕ್ಷೀಣಿಸಿತು. ರಾಂಪುರ-ಸಹಸ್ವಾನ್ ಘರಾನಾದ ಖಾನ್  ಆರಂಭದಲ್ಲಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದಾಗ್ಯೂ, ನಂತರದ ಹಂತದಲ್ಲಿ, ಅವರು ತಮ್ಮ ಚಿಕಿತ್ಸೆಯನ್ನು ಕೋಲ್ಕತ್ತಾದಲ್ಲಿ  ಮುಂದುವರಿಸಲು ನಿರ್ಧರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು