News Karnataka Kannada
Monday, April 29 2024
ದೇಶ

ʼನಿದ್ದೆಯನ್ನು ಯಾರೂ ಕಸಿಯುವಂತಿಲ್ಲʼ: ಹೈಕೋರ್ಟ್‌ ಆದೇಶ

Right To Sleep
Photo Credit : NewsKarnataka

ಮುಂಬೈ: “ನಿದ್ದೆ ಮನುಷ್ಯನ ಹಕ್ಕು ಹಾಗೂ ಮೂಲಭೂತ ಅವಶ್ಯಕತೆಯಾಗಿದೆ. ಯಾರೂ ಇದನ್ನು ಕಸಿಯಬಾರದು” ಎಂಬುದಾಗಿ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯೊಬ್ಬರನ್ನು ರಾತ್ರಿಯಿಡೀ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಹಾಗೂ ಮಂಜೂಷ ದೇಶಪಾಂಡೆ ಅವರು ಈ ಮೇಲಿನಂತೆ ಆದೇಶ ಹೊರಡಿಸಿದ್ದಾರೆ. “ಇ.ಡಿ ಅಧಿಕಾರಿಗಳು ಯಾರನ್ನೇ ಆಗಲಿ ವಿಚಾರಣೆ ನಡೆಸಲು, ಸಮನ್ಸ್‌ ನೀಡಲು, ಅವರ ಮನೆಗೆ ದಾಳಿ ನಡೆಸಿ ಪರಿಶೀಲನೆ ಮಾಡಲು, ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ನಿಯಮಿತ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು” ಎಂದು ಕೂಡ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

“ನಿದ್ದೆ ಮನುಷ್ಯನ ಹಕ್ಕಾಗಿದೆ. ಅದೊಂದು ಸಾಮಾನ್ಯ ಅವಶ್ಯಕತೆಯಾಗಿದೆ. ಯಾರಾದರೂ ಮನುಷ್ಯನ ನಿದ್ದೆಯ ಹಕ್ಕನ್ನು ಕಸಿದುಕೊಂಡರೆ, ಆತನ ನಿದ್ದೆಗೆ ಭಂಗ ಮಾಡಿದರೆ ಅದು ಮನುಷ್ಯನ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ, ಇ.ಡಿ ಅಧಿಕಾರಿಗಳು ಹೊತ್ತಲ್ಲದ ಹೊತ್ತಲ್ಲಿ ದಾಳಿ ನಡೆಸಿ, ವಿಚಾರಣೆ ಮಾಡಿದರೆ ಖಂಡಿತವಾಗಿಯೂ ಅವರ ನಿದ್ದೆಗೆ ಭಂಗವುಂಟಾಗುತ್ತದೆ. ಯಾವುದೇ ವ್ಯಕ್ತಿಗೆ ಸರಿಯಾದ ನಿದ್ದೆ ಇಲ್ಲದಿದ್ದರೆ ಆತನ ಮಾನಸಿಕ, ದೈಹಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು